ವಿಷಯಕ್ಕೆ ಹೋಗಿ
ಮಂಗಳೂರು ಡೈರಿ! ಭಾಗ 1

ಜನವಾಹಿನಿಯ ಪಾಳು ಬಿದ್ದ ಬಂಗಲೆಯ ನೆರಳಿನಲ್ಲಿ....

ನಾನು ಎಂಟನೆ ತರಗತಿಯಲ್ಲಿದ್ದಾಗಿನ ನೆನಪು. ತೀರ್ಥಹಳ್ಳಿಯಲ್ಲಿ ನಾನಿದ್ದ ಹಾಸ್ಟೆಲ್ಲಿಗೆ ಜನವಾಹಿನಿ ಪತ್ರಿಕೆ ಬರುತ್ತಿತ್ತು. ಬೆಳಗ್ಗೆ ಆಗುತ್ತಲೆ ಪತ್ರಿಕೆಗಾಗಿ ಪೈಪೋಟಿ ನಡೆಸುತ್ತಿದ್ದೆವು. ಇದಕ್ಕಾಗಿ ಹಲವಾರು ಭಾರಿ ನಮ್ಮಲ್ಲಿ ಗಲಾಟೆಗಳು ಆಗಿದ್ದವು. ಅದೇಕೋ ಆವತ್ತು ಜನವಾಹಿನಿಯೊಂದಿಗೆ ಆರ್ಥವಾಗದ ಸಂದಂಧವೊಂದು ನಮ್ಮಂತ ಚಿಕ್ಕವಯಸ್ಸಿನ ಹುಡುಗರಿಗೆ ಬೆಳೆದಿತ್ತು. ಹಾಗೆಯೆ ಲಂಕೇಶ್ ಪತ್ರಿಕೆ ಕೂಡ ಅದರಲ್ಲಿ ಬರುತ್ತಿದ್ದ ತುಂಟಾಟಕ್ಕಾಗಿ ಓದುತ್ತಿದ್ದೆವು!.

ಇವೆಲ್ಲವೂ ಹಳೆಯ ದಿನಗಳು, ಮಾಸಿದ ನೆನಪುಗಳು. ಸಹಜವಾಗಿಯೆ ನಾನು ಸಾಹಿತ್ಯದ ಬಗ್ಗೆ ಬೆಳೆಸಿಕೊಂಡಿದ್ದ ಆಸಕ್ತಿ, ನನ್ನಲ್ಲಿ ಹಲವು ಆಲೋಚನೆಗಳನ್ನು ಹುಟ್ಟುಹಾಕಿತು. ಹೊಸ ಪ್ರಪಂಚವೊಂದನ್ನು ಕಂಡ ಆನುಭವ. ಮಲೆನಾಡಿನಲ್ಲಿಯೆ ಹುಟ್ಟಿ ಬೆಳೆದು ಆಲ್ಲಿನ ಪರಿಸರದ ಜೊತೆ ಹೊಂದಿದ ಸಂಬಂಧವೊಂದು ಕಳಚಿಕೊಂಡದ್ದು ಚಳುವಳಿ ಹೋರಾಟ ಅಂತ ಬೀದಿಗೆ ಬಿದ್ದ ಮೇಲೆಯೆ.

ಅಲ್ಲಿಯವರೆಗಿದ್ದ ಊರಲ್ಲಿ ಶಿಕಾರಿ ಹುಚ್ಚು, ಕಾಡು ಸುತ್ತುವ ಗೀಳುಗಳು ವೈಚಾರಿಕತೆ ಎಂಬ ಸೋಗಿನಲ್ಲಿ ಪೇವಲವಾಗಿ ಕಂಡಿದ್ದವು.
ಜನವಾಹಿನಿ ನಂತರ ಇಷ್ಟವಾಗಿದ್ದು ಆದು ಪ್ರಗತಿಪರ ವಿಚಾರಗಳನ್ನು ಪ್ರತಿಪಾದಿಸುವ ಪತ್ರಿಕೆ ಎಂಬ ಕಾರಣಕ್ಕೆ. ಹಾಗಂತ ನಾನು ನಂಬಿಕೊಂಡಿದ್ದೆ. ಆಷ್ಟರಲ್ಲಾಗಲೆ ಅದು ತನ್ನ ಆಂತರಿಕ ಜಗಳಗಳಿಂದಾಗಿ ಮುಚ್ಚಿಹೋಗುತ್ತು. ಹಾಸ್ಟೆಲ್ಲಿಗೆ ಈಗ ಬೇರೆ ಪತ್ರಿಕೆ ಬರುತ್ತಿದೆ. ಈಗಿರುವವರು ಪತ್ರಿಕೆಗಾಗು ಮುಗಿಬೀಳುವ ಮನಸ್ಥಿತಿಯಲ್ಲಿ ಇಲ್ಲ ಎಂಬು ಒಂದು ಅಚ್ಚರಿ.

ಮಂಗಳೂರಿಗೆ ಬಂದು 4 ದಿನಗಳಿಗೆ ಇಂದು ಸ್ನೇಹಿತರ ಜೊತೆ ಬೆಳಗ್ಗಿನ ತಿಂಡಿ ಮುಗಿಸಿ ಇಂಡಸ್ಟ್ರಿಯಲ್ ಎರಿಯಾದ ದಾರಿಗುಂಟ ಹೋಗಿಬಂದೆ. ಮಧ್ಯದಲ್ಲಿ ಇದೇ ಜನವಾಹಿನಿ ಕಚೇರಿ ಎಂದು ಪಾಳು ಬಿದ್ದಿದ್ದ ಬಂಗಲೆ ತೋರಿಸಿದರು ಗೆಳೆಯರು. ನನಗೆ ಬಾಲ್ಯದ ಗೆಳೆಯರೊಬ್ಬರನ್ನು ನೋಡಿದಷ್ಟು ಖುಷಿಯಾಯಿತು. ಜೊತೆಗೆ ಒಂದುರೀತಿಯ ಬೇಜಾರು ಆಯಿತು. ಇವತ್ತು ಜನವಾಹಿನಿ ಇದ್ದಿದ್ದರೆ ಮಾರುಕಟ್ಟೆಯ ಅಗತ್ಯಕ್ಕೆ ತಕ್ಕ ಹಾಗೆ ಬದಲಾಗುತ್ತಿತ್ತೆನೊ. ಆದರೆ ಕನಿಷ್ಠ ಆಂತಹದೊಂದು ಪತ್ರಿಕೆಯ ಆಗತ್ಯವಂತೂ ಇದೆ ಅನ್ನಿಸುತ್ತದೆ.

ಸುಮ್ಮನೆ ಇರಲಿ ಎಂದು ಜನವಾಹಿನಿಯ ಅವಶೇಷಗಳ ಫೋಟೊ ತೆಗೆದುಕೊಂಡೆ. ನಿಮ್ಮ ಗಮನಕ್ಕೂ ಇರಲಿ ಎಂದು ಇದನ್ನು ಅಪ್ ಲೋಡ್ ಮಡಿದ್ದೇನೆ. ನೋಡಿ.....

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ದೇವೆಂದ್ರ ಎಂಬ ಹಸನ್ಮುಖಿ….! ರಾಯಚೂರು ಮುಗುಸಿ, ಕೊಪ್ಪಳದ ಕೆಲವು ಹಳ್ಳಿಗಳಲ್ಲಿ ಓಡಾಡಿಕೊಂಡು ಸೀದಾ ಹೊರಟಿದ್ದು ಗದಗ ಜಿಲ್ಲೆಗೆ. ಅಲ್ಲಿನ ಕೆಲವು ಗೆಳೆಯರು ಜೊತೆಯಾಗುತ್ತೇವೆ ಎಂದು ಹೇಳಿದ್ದರು ನಾವು ತಲುಪುವ ಹೊತ್ತಿಗೆ ಅವರು ತಮ್ಮದೇ ಕೆಲಸದ ಮೇಲೆ ಹೊರಟು ಹೋಗಿದ್ದರು. ಗದಗ ಜಿಲ್ಲೆಯ ರೋಣ ತಾಲೂಕಿನ ಬಿ.ಎಸ್. ಬೆಲೇರಿ ಎಂಬ ಜಿಲ್ಲಾ ಕೇಂದ್ರದಿಂದ ೫೫ ಕಿ.ಮೀ ದೂರದ ಹಳ್ಳಿಯೊಂದನ್ನು ತಲುಪುವುದೇ ದೊಡ್ಡ ಸಾಹಸದ ಮಾತಾಗಿತ್ತು. ಊರಿಗಿದ್ದ ಒಂದು ಹಳೆಯ ಸೇತುವೆ ಬಿದ್ದು ಹೋಗಿದ್ದರಿಂದ ಹಳ್ಳಿಗೆ ರಸ್ತೆ ಸಂಪರ್ಕವೇ ಇಲ್ಲವಾಗಿತ್ತು. ನಾವು ಹೋಗುವಾಗ ಹೊಳೆಯ ನೀರು ಕಡಿಮೆಯಾಗಿತ್ತು. ಹೊಳೆಯ ವರೆಗೂ ಟಮ್ ಟಮ್ ಎಂದು ಕರೆಯುವ ಆಟೋ ರಿಕ್ಷಾವನ್ನು ಬಾಡಿಗೆಗೆ ಹಿಡಿದು ಅಲ್ಲಿಂದ ಮೂರು ಕಿಮೀ ನಡೆದರೆ ಬೇಲೆರಿ ಸಿಗುತ್ತದೆ. ನಿಂಗು ಬೆಲೇರಿಯಲ್ಲಿ ಪಿಯುಸಿ ಓದಿರುವ ಯುವಕ. ಅಷ್ಟೆ ಅಲ್ಲ ನಿಂಗುಗೆ ಸ್ವಲ್ಪ ರಾಜಕೀಯದ ಗೀಳಿದೆ. ಸ್ಥಳೀಯ ರಾಜಕಾರಣಿಗಳ ಸೋಗಲಾಡಿತನಗಳು ಅನುಭವಕ್ಕೆ ಬಂದಿವೆ. ನಮ್ಮೆದುರು ಆರಂಭದಲ್ಲಿ ನೆರೆಯ ಸುತ್ತಮುತ್ತಲೇ ಮಾತನಾಡಿದ ನಿಂಗು ಮಾತಿನಲ್ಲಿ ಒಂದು ಸಾತ್ವಿಕ ಸಿಟ್ಟಿತ್ತು. ನಿಧಾನವಾಗಿ ಮಾತನಾಡಲು ಆರಂಭಿಸಿ ಕೊನೆಗೆ ಸ್ಥಳೀಯ ಗ್ರಾಮ ಪಂಚಾಯ್ತಿಯಲ್ಲಿ ಮೊದಲು ಬದಲಾವಣೆ ಆಗ್ಬೇಕು, ಹಾಗಾಗಿ ಕೆಲಸಕ್ಕೆ ಗೆಳೆಯರು ಬೆಂಗಳೂರಿಗೆ ಹೋಗೊಣ ಅಂದ್ರು ಇಲ್ಲೇ ಇದ್ದೀನಿ, ಈಗ ನೋಡಿ ನೆರೆ. ಏನಾದ್ರೂ ಒಳ್ಳೆದೂ ಮಾಡ್ಬೇಕು ಅಲ್ವಾ ಎಂದು ಬೆಂಗಳೂರು ಕನ್ನಡದ
‘ಹೆಮ್ಮರ’ ಹಳ್ಳಿ ಶಾಲೆಯ ಮಕ್ಕಳಿಗೆ ವರ! “ಕನ್ನಡಿಗಳನ್ನು ಕಿಟಕಿಗಳಾಗಿ ಪರಿವರ್ತಿಸುವುದೇ ಶಿಕ್ಷಣದ ಬಹುಮುಖ್ಯ ಕರ್ತವ್ಯ” -ಸಿಡ್ನಿ ಜೆ ಹ್ಯಾರಿಸ್. ಭಾರತದಲ್ಲಿ ಅತ್ಯಂತ ಅಪಾಯಕಾರಿ ಸ್ಥಿತಿಯಲ್ಲಿರುವುದು ಪ್ರಾಥಮಿಕ ಶಿಕ್ಷಣ. ಸರಕಾರಿ ಶಾಲೆಗಳಿಗೆ ಹೋಗುವ ಮಕ್ಕಳಿಗೆ ಉತ್ತಮ ಭವಿಷ್ಯ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದರೂ ಕೆಲವೊಮ್ಮೆ ಹಳ್ಳಿ ಶಾಲೆಗಳಲ್ಲಿ ಕ್ರಿಯಾಶೀಲತೆಯ ಕುಡಿಗಳು ಅರಳುತ್ತವೆ. ಇದು ಭಾರತದಂತಹ ದೇಶದಲ್ಲಿರು ಮತ್ತೊಂದು ಸಾಧ್ಯತೆ. ಸೆಲೆಬ್ರಿಟಿಗಳು ಎಂದು ಕರೆಸಿಕೊಳ್ಳುವ ಬಹುತೇಕ ಮಂದಿ ಹಳ್ಳಿ ಶಾಲೆಗಳಲ್ಲಿ ಕಲಿತು ಬಂದಿರುವುದು ಇದಕ್ಕೆ ಸಾಕ್ಷಿ. ಶಿಕ್ಷಣ ಎನ್ನುವುದು ನಾವು ಕಲಿತದ್ದನ್ನು ಅಧಿಕೃತಗೊಳಿಸುತ್ತದೆ. ಶಿಕ್ಷಕರು ಕೇವಲ ಮಾರ್ಗದರ್ಶನ ನೀಡಬಹುದೇ ಹೊರತು ಅದರಾಚೆಗಿನ ನಿರೀಕ್ಷೆಗಳಿಗೆ ಅವರು ನೀರೆರೆಯಲು ಸಾಧ್ಯವಿಲ್ಲ. ಆದರೆ ಇಂತಹ ಸಣ್ಣ ಮಾರ್ಗದರ್ಶನಗಳು ಸರಕಾರಿ ಶಾಲೆಗಳಲ್ಲಿ ಸಿಗದಿರುವ ಕಾರಣಕ್ಕೆ ಖಾಸಗಿ ಶಾಲೆಗಳ ಮೊರೆ ಹೋಗುವ ಪೊಷಕರು ನಮ್ಮಲ್ಲಿದ್ದಾರೆ. ಸರಕಾರಗಳ ದೂರದೃಷ್ಠಿಯ ಕೊರತೆ, ಸೌಲಭ್ಯಗಳ ಕೊರತೆ ಹಾಗೂ ಶಿಕ್ಷಕರಲ್ಲಿ ಬದ್ದತೆಯ ಕೊರತೆಗಳು ಇಂದು ಭಾರತದ ಪ್ರಾಥಮಿಕ ಶಿಕ್ಷಣದಲ್ಲಿನ ಬಹುಮುಖ್ಯ ಕೊರತೆಗಳು. ಆದರೆ ಇವುಗಳ ನಡುವೆಯೇ ಕುಂ.ವಿ ತರಹದ ಆದರ್ಶ ಶಿಕ್ಷಕರು ಕುಗ್ರಾಮಗಳ ಶಾಲೆಗಳಲ್ಲಿ ಕ್ರಾಂತಿಕಾರಕ ಬದಲಾವಣೆ
ಮಹಾಮಾರಿಯ ಭೀತಿಯಲ್ಲಿದ್ದ ತಲೆಮಾರಿ ಹಾಗೂ ಆಂದ್ರದ ಕುರಿತು ಅಭಿಮಾನ! ಮುಂಜಾನೆ ಹೊರಡುವಾಗ ತಲುಪಲಿದ್ದ ಹಳ್ಳಿಯ ಹೆಸರು ಕೂಡ ಗೊತ್ತಿರಲಿಲ್ಲ. ಸ್ಥಳೀಯ ಎನ್‌ಜಿಒ ಒಂದರ ಸಹಾಯದಿಂದ ’ತಲೆಮಾರಿ’ ಹಳ್ಳಿಗೆ ಹೊರಟಿದ್ದೆವು. ರಾಯಚೂರಿನಿಂದ ಸುಮಾರು ೫೨ ಕಿಮೀ ದೂರದಲ್ಲಿರುವ ತಲೆಮಾರಿ ನಾವು ಕಂಡ ಇತರ ಹಳ್ಳಿಗಳಿಗೆ ಹೋಲಿಸಿದರೆ ಅತಿ ಹೆಚ್ಚು ಹಾನಿಗೊಳಗಾದ ಹಳ್ಳಿ. ನಿಂತ ನೆಲದಿಂದ ಸುಮಾರು ೪೦ ಅಡಿ ಎತ್ತರಕ್ಕೆ ನೆರೆಯ ನೀರು ನುಗ್ಗಿ ಬಂದಿತ್ತಂತೆ. ಅದಕ್ಕೆ ಕುರುವುಗಳಂತೆ ನಾವು ಹೋದಾದ ಅಳಿದುಳಿದ ಮನೆಯ ಗೋಡೆಗಳ ಮೇಲೆ ಕೆಸರು ನೀರಿನ ಕುರುವು ಉಳಿದುಕೊಂಡಿತ್ತು. ತಲೆಮಾರಿಯ ಇನ್ನೊಂದು ವಿಶೇಷ ಎನಪ್ಪಾ ಅಂದ್ರೆ, ರಾಯಚೂರಿನ ಇತರ ನೆರೆ ಪೀಡಿತ ಹಳ್ಳಿಗಳಿಗೆ ಇಲ್ಲಿನ ಜನ ಮಾದರಿಯಾಗಿದ್ದರು. ನೆರೆ ನಿಂತು ಮೂರು ದಿನಗಳದ್ರೂ ಯಾವ ಜನಪ್ರತಿನಿಧಿಗಳು ವಿಚಾರಿಸಿಕೊಳ್ಳಲಿಲ್ಲ ಎಂಬ ಸಿಟ್ಟಿಗೆ ಎಂಎಲ್‌ಎ ಕಾರಿಗೆ ಬೆಂಕಿ ಇಟ್ಟಿದ್ದರು ಹಳ್ಳಿಯ ಜನ. ನಾವು ಹೋದಾಗ ಒಂದು ಪೊಲೀಸ್ ತುಕುಡಿ ಅತಂಕದಿಂದಲೇ ಊರು ಕಾಯುತ್ತಾ ನಿಂತಿತ್ತು. ಸುಟ್ಟು ಕರಕಲಾದ ವಾಹನಗಳು ನೆರೆಯ ಸ್ಮಾರಕಗಳಂತೆ ಉಳಿಸಿಕೊಂಡಿದ್ದರು. ಊರು ತುಂಬ ಸತ್ತ ಎಮ್ಮೆಗಳ ಹೆಣಗಳ ತುಂಬಾ ಹುಳುಗಳು ಮಿಜಿಗುಡುತ್ತಿದ್ದವು. ಮುಂದೆ ಎದುರಾಗಬಹುದಾದ ಮಹಾಮಾರಿಯೊಂದರ ಮುನ್ಸೂಚನೆಯಂತೆ ಊರು ಗಬ್ಬು ವಾಸನೆ ಹೊಡೆಯುತ್ತಿತ್ತು. ಊರೊಳಗೆ ಕಾಲಿಡಲಾಗದಂತೆ ಕೆಸರು ತುಂಬಿಕೊಂಡಿತ್ತು. ಆದರೆ ಬಹುತೇಕರು ತಮ್ಮ ಮನೆಗಳ ಒಳಗೆ ಅಳಿದ