ಕಲ್ಲೂರಿ ಎಂಬ ಸಿನಿಮಾ ನೋಡಿದ್ದೀರಾ...? ಪ್ರಶಾಂತ್ ಹುಲ್ಕೋಡು ಸಿನಿಮಾ ಹೇಗಿರಬೇಕು ಎಂದು ನಿರ್ದಿಷ್ಟವಾಗಿ ಹೇಳುವದು ಕಷ್ಟ. ಆದರೆ ಒಳ್ಳೆಯ ಸಿನಿಮಾ ನೋಡುಗನ್ನು ತನ್ನಲ್ಲಿ ಒಂದು ಪಾತ್ರವಾಗಿಸುತ್ತದೆ ಅನ್ನುತ್ತಾರೆ. ಹಾಗಾಗಿಯೆ ಬಾಲಿವುಡ್ ಮಂದಿ ರಿಯಲ್ ಸ್ಟೋರಿಗಳನ್ನು ರೀಲ್ನಲ್ಲಿ ತರಲು ಹೆಚ್ಚು ಶ್ರಮವಹಿಸುತ್ತಾರೆ. ಬಾಲಿವುಡ್ನಲ್ಲಿಯೂ ಆಂತಹ ಪ್ರಯೋಗಗಳಾಗುತ್ತಿವೆ. ಬದುಕಿಗೆ ಹತ್ತಿರವೆನಿಸುವ ಕತೆಗಳನ್ನು ತೆರೆಗೆ ಅಳವಡಿಸುವುದು ಸುಲಭದ ಕೆಲಸವಲ್ಲ. ಅದಕ್ಕೆ ತನ್ನದೆ ಆದ ಕಮಿಟ್ಮೆಂಟ್, ಡೆಡಿಕೇಶನ್ ಇರಬೇಕಾಗುತ್ತದೆ. ಚಿತ್ರದ ನಿರ್ದೇಶಕನಿಗೆ ಅಂತಹ ಸಂವೇದನೆ ಇರದಿದ್ದರೆ ಇಡೀ ಚಿತ್ರ ಹಾಳಾಗಿಬಿಡುತ್ತದೆ. ಈ ಮಾತಿಗೆ ವಿರುದ್ಧವಾಗಿ ಇತ್ತೀಚೆಗೆ ಬಂದ ತಮಿಳಿನ ಕಲ್ಲೂರಿ ಉತ್ತಮ ಉದಾಹರಣೆ. ಈ ಚಿತ್ರದ ಕುರಿತು ಹೇಳುವ ಮುನ್ನ ನಿಮಗೆ ಇದನ್ನು ತೆರೆಗೆ ತಂದ ನಿರ್ದೇಶಕನ ಶ್ರಮದ ಕುರಿತು ಹೇಳಬೇಕು. ಅದು ಕಲ್ಲೂರಿಗಿಂತ ಲೂ ಇಂಟೆರಿಸ್ಟಿಂಗ್. ತಮಿಳಿನ ಪ್ರಸಿದ್ಧ ಚಿತ್ರ ಕಾದಲ್ ನೆನಪಿರಬೇಕು ನಿಮಗೆ. ಅಂತರಜಾತಿ ಪ್ರೇಮ ಕತೆಯನ್ನು ಅದ್ಭುತವಾಗಿ ನಿರೂಪಿಸಿದ ಚಿತ್ರ. ಅದರ ನಿರ್ದೇಶಕ ಬಾಲಾಜಿ ಶಕ್ತಿವೇಲು ಕಾದಲ್ ನಂತರ ನಿರ್ದೇಶಿಸಿದ ಚಿತ್ರವೇ ಕಲ್ಲೂರಿ. ತಮಿಳಿನಲ್ಲಿ ಕಲ್ಲೂರಿ ಎಂದರೆ ಕಾಲೇಜು ಎಂದರ್ಥ. ಕಾದಲ್ ಸೂಪರ್ ಹಿಟ್ ಆದ ನಂತರ ಬಾಲಾಜಿ ಶಕ್ತಿವೇಲು ಮುಂದೆ ನಿರ್ಮಾಪಕರ ದಂಡೇ ನೆರೆದಿತ್ತಂತೆ. ಆದರೆ ಈ ಮಹಾಶಯ ಯಾವುದನ್ನು ಒಪ್ಪಿಕೊಳ್ಳದೆ ಆರ್ಥಿಕ
ಇಪ್ಪತ್ತನೆ ಶತಮಾನದ ಮಧ್ಯಭಾಗದಲ್ಲಿ ಉತ್ತರ ಕರ್ನಾಟಕದಿಂದ ಪಾ.ಪುರವರು ಪ್ರಕಟಿಸುತ್ತಿದ್ದ "ವಿಶಾಲ ಕರ್ನಾಟಕ" ಎಂಬ ಪತ್ರಿಕೆಯಲ್ಲಿ ನಮ್ಮ ಬೀchi ಬರೆಯುತ್ತಿದ್ದ ಅಂಕಣದ ಹೆಸರು "ಕೆನೆ ಮೊಸರು". ಇದನ್ನೆ ನನ್ನ blogಗಿಗೆ ನಾಮಕರಣ ಮಾಡಿದ್ದೇನೆ.