ಮಂಗಳೂರು ಡೈರಿ ಕೊನೆಯ ಭಾಗ ಸಲಿಂಗಿ ಪ್ರೇಮಿ(?)ಗಳ ನೆನಪಿನಲ್ಲಿ...! ಕಡಲ ತಡಿಯ ಈ ಊರುಗೆ ಹಲವು ಭಾಷೆಗಳಲ್ಲಿ ಬೇರೆ ಬೇರೆ ಹೆಸರುಗಳಿವೆ ಅನ್ನುವುದೆ ಕುತೂಹಲಕಾರಿ ಸಂಗತಿ. ನಮ್ಮ ಊರುಗಳ ಹೆಸರು ಜಗತ್ತಿನ ಯಾವ ಭಾಷೆಯಾದರು ತನ್ನ ಗುಣ ಧರ್ಮವನ್ನು ಬಿಟ್ಟು ಕೊಡುವುದಿಲ್ಲ. ಆದರೆ ಮಂಗಳೂರು ಕನ್ನಡ ಭಾಷೆಯ ಹೆಸರು ಮಾತ್ರ. ಇದು ಸರಕಾರಿ ಕಡತಗಳಲ್ಲಿ ಅಧಿಕೃತತೆ ಹೊಂದಿರಬಹುದೇನೋ, ಆದರೆ ಜನ ಸಂಸ್ಕೃತಿ ಭಾಷೆಗಳಲ್ಲಿ ತಮ್ಮದೆ ಹೆಸರಗಳನ್ನು ಮಂಗಳೂರಿಗೆ ನೀಡಿದ್ದಾರೆ. ತುಳು ಭಾಷಿಕರು ಇದನ್ನು ‘ಕುಡ್ಲ’ ಎನ್ನುತ್ತಾರೆ. ಬ್ಯಾರಿ ಮಾತನಾಡುವವರಿಗೆ ಇದು ‘ಮೈಕಳ’ವಾಗಿದೆ. ಹತ್ತಿರದ ಕೇರಳಿಗರ ಮಲೆಯಾಳಂನಲ್ಲಿ ಇದು ‘ಮಂಗಳಾಪುರ’. ಪುಸ್ತಕ ಪ್ರೀತಿ, ಅಕ್ಷರ ಪ್ರೀತಿಗಳು ಇಲ್ಲಿ ಹೆಚ್ಚು ಕಾಣಸಿಗುತ್ತವೆ. ಜೀವನಾನುಭವವನ್ನು ಕತೆಯಾಗಿಸಿದ ಅದ್ಭುತ ಕತೆಗಾರರು ದಕ್ಷಿಣ ಕನ್ನಡದಿಂದ ಮೂಡಿ ಬಂದಿದ್ದಾರೆ. ಆದರೆ ಕಳೆದ ಎರಡು ತಿಂಗಳಲ್ಲಿ ಕಂಡಿದ್ದು ಮಂಗಳೂರಿನ ಬದಲಾದ ಪರಿಸ್ಥಿತಿ. ಸೃಜನಶೀಲತೆಗಿಂತ ಇಲ್ಲಿ ಧಾರ್ಮಿಕ ಕಟ್ಟಳೆಗಳು ಬಹುಮುಖ್ಯವಾಗಿ ಕಾಡುತ್ತವೆ. ಇವತ್ತು ಧರ್ಮ ಐಡೆಂಟಿಟಿ ನೀಡುತ್ತಿದೆ. ಹಿಂದುತ್ವ ಪ್ರಬಲವಾಗುತ್ತಿರುವ ಜೊತೆಯಲ್ಲೇ ಮುಸ್ಲಿಂ, ಕ್ರಿಶ್ಚಿಯನ್ ಧರ್ಮದವರು ತಮ್ಮ ಧಾರ್ಮಿಕ ಐಡೆಂಟಿಟಿಗಾಗಿ ಸೆಣಸಾಡುತ್ತಿದ್ದಾರೆ. ಇಲ್ಲಿನ ಮತ್ತೊಂದು ವಿಶೇಷ ಸಂಜೆ ಪತ್ರಿಕೆಗಳದ್ದು. ಮುಖ ಪುಟದ ತುಂಬಾ ಭೀಕರ ಚಿತ್ರಗಳನ್ನು ಹೊತ್ತು ಬರುವ ಸಂಜೆ ಪತ್ರಿಕೆಗಳು ಮದ್ಯ
ಇಪ್ಪತ್ತನೆ ಶತಮಾನದ ಮಧ್ಯಭಾಗದಲ್ಲಿ ಉತ್ತರ ಕರ್ನಾಟಕದಿಂದ ಪಾ.ಪುರವರು ಪ್ರಕಟಿಸುತ್ತಿದ್ದ "ವಿಶಾಲ ಕರ್ನಾಟಕ" ಎಂಬ ಪತ್ರಿಕೆಯಲ್ಲಿ ನಮ್ಮ ಬೀchi ಬರೆಯುತ್ತಿದ್ದ ಅಂಕಣದ ಹೆಸರು "ಕೆನೆ ಮೊಸರು". ಇದನ್ನೆ ನನ್ನ blogಗಿಗೆ ನಾಮಕರಣ ಮಾಡಿದ್ದೇನೆ.