ಯುವ ಪತ್ರಕರ್ತನ 'ಕನಸಿನ ಎಡಿಟರ್' ಒಂದು ಸುಳಿವನ್ನೂ ಕೊಡದೆ ಕಣ್ಮರೆಯಾಗಿದ್ದಾರೆ! ಇ. ರಾಘವನ್ ಕೈಗೆ ಆಯುಧ ಕೊಟ್ಟು, ರಣ ಬಿಸಿಲಿನ ಮೈದಾನದ ನಡುವೆ, ಶತ್ರುವನ್ನು ಗುರಿಇಟ್ಟು ತೋರಿಸಿ, ಮರೆಯಲ್ಲಿ ನಿಂತು ಮುಗುಳ್ನುಗುತ್ತಿದ್ದ ಭಾವ ಹಠಾತ್ ಗೊಂದಲಕ್ಕೀಡಾಗಿದೆ. ಒಂದು ವರ್ಷಕ್ಕೂ ಕಡಿಮೆ ಅವಧಿಯ ಒಡನಾಟವನ್ನು ಈ ಹೊತ್ತಿಗೆ ವಿವರಿಸಲು ಪದಗಳು ಸಿಗುತ್ತಿಲ್ಲ. ತೊಟ್ಟು ಕಟ್ಟಿಸಿಕೊಂಡು, ಸುವಾಸನೆ ಬೀರುವ ಮಾಲೆ ರೂಪಹೊಂದಿ, ಮಾರುಕಟ್ಟೆಯ ಬಿಸಿಲಿನಲ್ಲಿ ನೀರು ಚಿಮುಕಿಸಿಕೊಂಡು, ಗಿರಾಕಿಯ ಆಗಮನಕ್ಕಾಗಿ ಕಾಯುತ್ತಿದ್ದ "ಅಕ್ಷರ"ಗಳನ್ನೂ ಗೌರವದಿಂದಲೇ ನೋಡಿಕೊಳ್ಳುತ್ತಿದ್ದ ಸಂಪಾದಕರೊಬ್ಬರ ಕುರಿತು ಮಾತುಗಳಿವು. ಇಷ್ಟೆಲ್ಲಾ ಇಲ್ಯಾಕೆ ಹೇಳಬೇಕಾಗಿದೆ ಎಂದರೆ ನಿನ್ನೆ(ಶನಿವಾರ) ನಂ.1 ಕನ್ನಡ ಪತ್ರಿಕೆಯ ಸಂಪಾದಕ ಎತಿರಾಜನ್ ರಾಘವನ್ ನಮ್ಮನ್ನಗಲಿದ್ದಾರೆ. ಅವರ ಕೆಳಗೆ ಕೆಲಸ ಮಾಡಿದ ಅನುಭವ ಇದೇ ಮೇ.18ಕ್ಕೆ ಒಂದು ವರ್ಷ ತುಂಬುತ್ತದೆ, ಅಷ್ಟೆ! ಅವರು ತೀರಿಕೊಂಡರು ಎಂಬ ಸುದ್ದಿ 'ಸ್ಫೋಟ'ವಾಗುವ ಹೊತ್ತಿಗೆ ನಾನು ಕಚೇರಿಯಲ್ಲಿದ್ದೆ. ಕಳೆದ ನೂರ ಎಪ್ಪತ್ತು ಚಿಲ್ಲರೆ ದಿನಗಳ ಹಿಂದೆ ಶುರುವಾದ 'ಯುವ ಗರ್ಜನೆ' ಎಂಬ ಪರಿಕಲ್ಪನೆಗೆ ದೊಡ್ಡ ಮೈಲಿಗಲ್ಲು ಸಿಕ್ಕ ದಿನ ಅದು. ಪ್ರಾದೇಶಿಕ ಭಾಷೆಯ ಪತ್ರಿಕೆಯೊಂದು ಕಾರ್ಪೋರೇಟ್ ಜಗತ್ತಿನ ವೇದಿಯಲ್ಲಿ ನಿಂತು ತಮ್ಮ ನಿಲುವನ್ನು ತಣ್ಣಗೆ ವಿವರಿಸಿದ ಸಮಯ ಕೂಡ. ಅದರ ವರದಿಗಾ
ಆರೆಸ್ಸೆಸ್ ಕುರಿತು ಒಂದು ಟಿಪ್ಪಣಿ photo:indiawire ಸಮಕಾಲೀನ ಸಂದರ್ಭದಲ್ಲಿ ಆರೆಸ್ಸೆಸ್ ಅಥವಾ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಭಾರತದ ಅತಿ ದೊಡ್ಡ ರಾಜಕೀಯ(?) ಸಂಘಟನೆ. ಸಧ್ಯಕ್ಕೆ ಗಣನೀಯ ಪ್ರಮಾಣದ ವಿರೋಧವನ್ನು ಮತ್ತು ಅದೇ ಪ್ರಮಾಣದ ಸಂಘಟನಾ ಸಾಮರ್ಥ್ಯವನ್ನು ಆರೆಸ್ಸೆಸ್ ಕಟ್ಟಿಕೊಂಡಿದೆ. ಬ್ರಾಹ್ಮಣಶಾಹಿಗಳು, ಚಡ್ಡಿಗಳು, ಫ್ಯಾಸಿಸ್ಟರು ಹೀಗೆ ಹಲವಾರು ಉಪಮೇಯಗಳು ಕಳೆದ ೮೦ ವರ್ಷಗಳಲ್ಲಿ ಆರೆಸ್ಸೆಸ್ಗೆ ಅನ್ವರ್ಥವಾಗಿ ಹುಟ್ಟಿಕೊಂಡರು ದೇಶಭಕ್ತರು ಎಂಬ ಪಟ್ಟವನ್ನು ಸಂಘ ಯಾರಿಗೂ ಬಿಟ್ಟುಕೊಟ್ಟಿಲ್ಲ. ದೇಶ, ದೇಶಪ್ರೇಮ ಎಂಬ ಪರಿಭಾಷೆಗೆ ಏನೇ ಸೈದ್ಧಾಂತಿಕ ವಿಶ್ಲೇಷಣೆ ಕೊಟ್ಟರು ಸಾಮಾನ್ಯ ಜನರ ಕಣ್ಣಲ್ಲಿ ಆರೆಸ್ಸೆಸ್ ರೂಢಿಸಿರುವ ಪರದೇಶ ವಿರೋಧಿ ಭಾರತ ಪ್ರೇಮ ಆಳವಾಗಿ ಬೇರುಬಿಟ್ಟಿದೆ. ಇವತ್ತಿಗೆ ಆರೆಸ್ಸೆಸ್ ಕುರಿತು ಏಕಮುಖವಾದ ವಿರೋಧದ ಅಥವಾ ಕುರುಡು ಅಭಿಮಾನದ ಸಾಹಿತ್ಯಗಳು ಲಭ್ಯವಾಗುತ್ತವೆಯೇ ಹೊರತು ಆರೆಸ್ಸೆಸ್ನ ಸಂಘಟನೆಯ ಆಳ, ಅದು ಬೆಳೆಯುತ್ತಿರುವ ವೇಗದ ಕುರಿತು ಗಂಭೀರ ಬರಹಗಳು ವಿರಳ. ಕೋಮುವಾದಕ್ಕೆ ಪರ್ಯಾಯವಾಗಬೇಕಿದ್ದ ಜಾತ್ಯಾತೀತವಾದ ಜನರಿಗೆ ಒಂದು ಕೋಮಿನ ಪರವಾದ ನಿಲುವು ಎಂಬತೆ ಕಾಣುತ್ತಿರುವುದಕ್ಕೆ ಇದು ಕಾರಣವಿರಬಹುದು. ೧೯೨೦ರ ಸುಮಾರಿಗೆ ಆರೆಸ್ಸೆಸ್ನ ಹಿಂದೂ ರಾಷ್ಟ್ರದ ಸಿದ್ಧಾಂತ ಭಾರತದ ರಾಜಕೀಯದಲ್ಲಿ ಯಾವುದೇ ಪ್ರಾಮುಖ್ಯತೆ ಹೊಂದಿರಲಿಲ್ಲ. ಹಿಂದುತ್ವದ ಪ್ರತಿಪಾದನೆಗಾಗಿ ೧೯೨೫ರಲ್ಲಿ ಕೇಶವ ಬಲಿರಾಮ್ ಹೆಡ್ಗೆ