ವಿಷಯಕ್ಕೆ ಹೋಗಿ
ದಲ್ಲಿ ೨೦೦೯. ಜುಲೈ,28ರಲ್ಲಿ ಪ್ರಕಟವಾದ ಲೇಖನ

ನಮಗೆ ಈತ ಭಯೋತ್ಪಾದಕ. ಅವರಿಗೆ ಬರೀ ‘ಬಂದೂಕುಧಾರಿ!’
ಪ್ರಶಾಂತ್ ಹುಲ್ಕೋಡು
ಮಂಗಳವಾರ, 2009 (06:04 IST)

ಮೊಹಮ್ಮದ್ ಅಜ್ಮಲ್ ಅಮೀರ್ ಕಸಬ್ ಗೊತ್ತಲ್ಲ. ಅದೇ ಮುಂಬೈ ದಾಳಿ ಪ್ರಕರಣದಲ್ಲಿ ಸೆರೆ ಸಿಕ್ಕ ಏಕೈಕ ಆರೋಪಿ. ಸಧ್ಯ ಪ್ರಪಂಚದ ಮಾಧ್ಯಮಗಳ ಮುಖ ಪುಟದಲ್ಲಿ ಕಸಬ್ ಜಾಗ ಪಡೆದುಕೊಂಡಿದ್ದಾನೆ. ವಿಶೇಷ ನ್ಯಾಯಾಲಯದ ವಿಚಾರಣೆ ಸಮಯದಲ್ಲಿ ತನ್ನ ಉಡಾಫೆ- ಹಾಗೂ ವಿಚಿತ್ರ ನಡವಳಿಕೆಗಳಿಂದ ಎಲ್ಲರ ಗಮನ ಸೆಳೆದಿರುವ ಕಸಬ್ ಕುರಿತಾದ ಲೇಟೆಸ್ಟ್ ಸುದ್ಧಿಯೊಂದು ಬಂದಿದೆ. ಏನಪ್ಪ ಅಂದ್ರೆ, ಕಸಬ್ ಹಾಗು ಆತನ ಉಳಿದ ೯ ಜನ ಕಳೆದ ನವೆಂಬರ್‌ನಲ್ಲಿ ಮುಂಬೈ ಎಂಬ ಮಹಾನಗರಿಗೆ ಲಗ್ಗೆ ಇಟ್ಟದ್ದು ನಿಮಗೆ ಗೊತ್ತೇ ಇದೆ. ಈಗ ಅವರ ಕೃತ್ಯವನ್ನು ಏನೆಂದು ಕರೆಯಬೇಕು ಎಂದು ಸುದ್ಧಿ ಮನೆಗಳ ಪದ ಪ್ರಯೋಗಶಾಲೆಯಲ್ಲಿ ಸಾಣೆ ಹಿಡಿಯಲಾಗುತ್ತಿದೆ.
ಕಸಬ್ ಪ್ರಕರಣ ಕುರಿತು ಸಿಎನ್ ಎನ್ ವರದಿ


ಇದಕ್ಕೆ ಕಾರಣವೂ ಇದೆ. ಕಸಬ್ ವಿಚಾರಣೆಗಳನ್ನು ವರದಿ ಮಾಡುತ್ತಿರುವ ಅಮೆರಿಕಾದ ಬಹುತೇಕ ಮಾಧ್ಯಮಗಳು ಕಸಬ್‌ನನ್ನು ಭಯೋತ್ಪಾದಕ ಎಂದು ಕರೆಯುತ್ತಿಲ್ಲ. ನ್ಯೂಯಾರ್ಕ್ ಟೈಮ್ಸ್‌ನಿಂದ ಹಿಡಿದು ವಾಲ್ ಸ್ಟ್ರೀಟ್ ಜರ್ನಲ್‌ವರೆಗೆ ಕಸಬ್ ಗನ್ ಮ್ಯಾನ್ ಅಷ್ಟೆ. ಅಮೆರಿಕಾದ ಪತ್ರಿಕೆಗಳ ಈ ಪದ ಪ್ರಯೋಗ ಸುದ್ಧಿ ಪತ್ರಿಕೆಗಳಲ್ಲಿ ಭಾಷೆ ಬಳಕೆಯ ಕುರಿತಾದ ಹೊಸ ಚರ್ಚೆಗೆ ಕಾರಣವಾಗಿದೆ.

ಕಸಬ್ ನ್ಯಾಯಾಲಯದಲ್ಲಿ ಇದ್ದಕ್ಕಿದ್ದ ಹಾಗೆ ‘ನಾನು ತಪ್ಪು ಮಾಡಿದ್ದೇನೆ, ನನ್ನನ್ನು ಗಲ್ಲಿಗೇರಿಸಿ’ ಎಂದು ತಪ್ಪೊಪ್ಪಿಕೊಂಡ ನಾಟಕೀಯ ಬೆಳವಣಿಗೆ ನಡೆದ ನಂತರ ವಾಷಿಂಗ್‌ಟನ್ ಪೋಸ್ಟ್ ಪತ್ರಿಕೆ ೪೨೮ ಪದಗಳ ವರದಿಯೊಂದನ್ನು ಪ್ರಕಟಿಸಿತು. ‘ತಪ್ಪೊಪ್ಪಿಕೊಂಡ ಮುಂಬೈ ಗನ್ ಮ್ಯಾನ್’ ಎಂಬ ತಲೆಬರಹ ಹೊತ್ತಿದ್ದ ಈ ವರದಿಯಲ್ಲಿ ಎಲ್ಲಿಯೂ ‘ಭಯೋತ್ಪಾದಕ’ ಎಂಬ ಪದವನ್ನು ಬಳಸಲಿಲ್ಲ. ಹಾಗೆಯೆ ೧೦೫೦ ಪದಗಳ ನ್ಯೂಯಾರ್ಕ್ ಟೈಮ್ಸ್‌ನ ಇಂತಹದೇ ವರದಿಯಲ್ಲಿ ಕಸಬ್ ಕೇವಲ ‘ಶಂಕಿತ ದಾಳಿಕೋರ’ ಅಷ್ಟೆ. ಆದರೆ ವಾಲ್ ಸ್ಟ್ರೀಟ್ ಜರ್ನಲ್ ಮುಂಬೈ ದಾಳಿಯನ್ನು ‘ಭಯೋತ್ಪಾದಕ ಕೃತ್ಯ’ ಎಂದು ಕರೆದಿದ್ದರೂ, ಕಸಬ್ ಪಡೆಯನ್ನು ‘೧೦ ಶಂಕಿತ ಗನ್ ಮೆನ್’ ಎಂದು ಹೆಸರಿಸಿತ್ತು.


ಕಸಬ್ ಪ್ರಕರಣ ಕುರಿತು ‘ವಾಷಿಂಗ್ ಟನ್’ ಪೋಸ್ಟ್ ವರದಿ


ಎಂತಹ ವಿಚಿತ್ರ ನೋಡಿ, ಭಾರತದ ಪತ್ರಿಕೆಗಳ ಪಾಲಿಗಾಗಲೇ ಭಯೋತ್ಪಾದಕರಾದವರು ಅಮೆರಿಕಾದ ಪತ್ರಿಕೆಗಳ ಪಾಲಿಗೆ ಗನ್ ಮೆನ್‌ಗಳು, ದಾಳಿಕೋರರು, ಶಂಕಿತ ಕೊಲೆಗಡುಕರು ಅಷ್ಟೆಯಾಗಿದ್ದಾರೆ. ಹಾಗಾಗಿಯೆ ಅಮೆರಿಕಾದ ಪತ್ರಿಕೆಗಳಲ್ಲಿ ಮುಂಬೈ ಘಟನೆಯ ಕುರಿತು ವರದಿ ಮಾಡುವಾಗ ಬಳಸ್ಪಡುತ್ತಿರುವ ಪದ ಪ್ರಯೋಗಗಳಿಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವು ಓದುಗರು ಇದಕ್ಕೆ ತೀಕ್ಷ್ಣವಾಗಿಯೆ ತಿರುಗೇಟು ನೀಡಿದ್ದಾರೆ. ಕಸಬ್‌ನಂತವರು ಭಯೋತ್ಪಾದಕರಾಗದೇ ಸ್ವಾತಂತ್ರ್ಯ ಹೋರಾಟಗಾರರಾಗಲೂ ಸಾಧ್ಯವಾ ಎಂದು ಜಾಣ ಓದುಗರೊಬ್ಬರು ನ್ಯೂಯಾರ್ಕ್ ಟೈಮ್ಸ್‌ಗೆ ಪತ್ರ ಬರೆದಿದ್ದಾರೆ.
ಕಸಬ್ ಪ್ರಕರಣ ಕುರಿತು ‘ಲಾಸ್ ಏಂಜಲೀಸ್ ಟೈಮ್ಸ್’ ವರದಿ


ಇದಕ್ಕೆ ಟೈಮ್ಸ್‌ನ ಸಾರ್ವಜನಿಕ ವಿಭಾಗದ ಸಂಪಾದಕರಾಗಿರುವ ಕ್ಲಾರ್ಕ್ ಹೋಐಟ್ ಅಷ್ಟೆ ಜಾಣ್ಮೆಯ ಉತ್ತರವನ್ನು ನೀಡಿದ್ದಾರೆ. ‘ಮುಂಬೈ ದಾಳಿ ನಡೆದ ನಂತರ ಟೈಮ್ಸ್‌ನಲ್ಲಿ ಹಲವು ವರದಿಗಳು ಪ್ರಕಟವಾಗಿವೆ. ಇದರಲ್ಲಿ ವಿಭಿನ್ನ ಪದಗಳನ್ನು ಬಳಸಲಾಗಿದೆ. ನಮಗೆ ಇಂತಹದೆ ಪದಗಳನ್ನು ಬಳಸಬೇಕೆಂಬ ಕಟ್ಟುಪಾಡುಗಳು ಇಲ್ಲ. ಆದರೆ ವರದಿಯಲ್ಲಿ ಬಳಸುವ ಪದಗಳು ಸೂಕ್ಷ್ಮವಾಗಿರಬೇಕು. ಮುಂಬೈ ದಾಳಿ ನಡೆಸಿದವರು ತಮ್ಮನ್ನು ತಾವು ಎಲ್ಲಿಯೂ ಭಯೋತ್ಪಾದಕರು ಎಂದು ಕರೆದುಕೊಂಡಿಲ್ಲ. ಸಹಜವಾಗಿಯೇ ಪತ್ರಿಕೆಗಳು ಭಯೋತ್ಪಾದಕರು ಎಂದು ಇಂತವರನ್ನು ಕರೆದರೆ ಜನ ಸುಲಭವಾಗಿ ನಂಬುತ್ತಾರೆ. ಆದರೆ ರಾಜಕೀಯ, ಧಾರ್ಮಿಕ, ಪ್ರಾದೇಶಿಕವಾದ ಬೇಡಿಕೆಗಳನ್ನಿಟ್ಟುಕೊಂಡು ಜನರ ಮೇಲೆ ದಾಳಿ ಮಾಡುವವರನ್ನು ಏನೆಂದು ಕರೆಯಬೇಕು ಎಂಬುದು ಇನ್ನೂ ಇತ್ಯರ್ಥವಾಗಿಲ್ಲ’ ಎಂದು ಅವರು ತಿಳಿಸಿದ್ದಾರೆ.

ಇವೆಲ್ಲ ಏನೇ ಇರಲಿ, ಆರೋಪಿಗಳಿಗೂ ಅಪರಾಧಿಗಳಿಗೂ ದೊಡ್ಡ ವ್ಯತ್ಯಾಸವಿರುತ್ತದೆ. ಮುಂಬೈ ದಾಳಿಯನ್ನು ಹೊರತು ಪಡಿಸಿ ಹೇಳುವುದಾದರೆ, ಬಹುತೇಕ ಪ್ರಕರಣಗಳಲ್ಲಿ ನಿರಪರಾಧಿಗಳು ಆರೋಪಗಳನ್ನು ಹೊತ್ತಿರುತ್ತಾರೆ. ಆದರೆ ಸುದ್ಧಿ ಮನೆಯಲ್ಲಿರುವವರು ಇಂತಹ ಸೂಕ್ಷ್ಮವನ್ನು ಗಮನಿಸದೆ ಅಪರಾಧ ಸಾಬೀತಾದ ರೀತಿಯಲ್ಲಿ ವರದಿಗಳನ್ನು ಕೀಲಿಸುತ್ತಾರೆ. ಅಮೆರಿಕಾದ ಬಹುತೇಕ ಪತ್ರಿಕೆಗಳು ಮುಂಬೈ ದಾಳಿಯ ಕುರಿತು ಇನ್ನಷ್ಟು ಸಾಕ್ಷ್ಯಾಧಾರಗಳು ಸಿಗದೆ ಘಟನೆಯಲ್ಲಿ ಕಸಬ್‌ನನ್ನು ಆರೋಪಿಯನ್ನಾಗಿ ಮಾಡಲು ಹಿಂದೇಟು ಹಾಕುತ್ತಿವೆ ಎಂಬ ಮಾತಿದೆ.

ಒಟ್ಟಿನಲ್ಲಿ ಕಾಫಿರನ್ನು ಮುಗಿಸಿ ಸ್ವರ್ಗ ಸೇರಲು ಬಂದ ಕಸಬ್ ಎಂಬ ಬಿಸಿ ರಕ್ತದ ಹುಡುಗ ಇವತ್ತು ಪ್ರಪಂಚದ ಸುದ್ಧಿಯ ಸೆಂಟರ್ ಆಫ್- ಸೆನ್ಸೇಶನ್ ಆಗಿದ್ದಾನೆ.

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

'ಕನಸಿನ ಎಡಿಟರ್'!

ಯುವ ಪತ್ರಕರ್ತನ 'ಕನಸಿನ ಎಡಿಟರ್' ಒಂದು ಸುಳಿವನ್ನೂ ಕೊಡದೆ ಕಣ್ಮರೆಯಾಗಿದ್ದಾರೆ! ಇ. ರಾಘವನ್ ಕೈಗೆ ಆಯುಧ ಕೊಟ್ಟು, ರಣ ಬಿಸಿಲಿನ ಮೈದಾನದ ನಡುವೆ, ಶತ್ರುವನ್ನು ಗುರಿಇಟ್ಟು ತೋರಿಸಿ, ಮರೆಯಲ್ಲಿ ನಿಂತು ಮುಗುಳ್ನುಗುತ್ತಿದ್ದ ಭಾವ ಹಠಾತ್ ಗೊಂದಲಕ್ಕೀಡಾಗಿದೆ. ಒಂದು ವರ್ಷಕ್ಕೂ ಕಡಿಮೆ ಅವಧಿಯ ಒಡನಾಟವನ್ನು ಈ ಹೊತ್ತಿಗೆ ವಿವರಿಸಲು ಪದಗಳು ಸಿಗುತ್ತಿಲ್ಲ. ತೊಟ್ಟು ಕಟ್ಟಿಸಿಕೊಂಡು, ಸುವಾಸನೆ ಬೀರುವ ಮಾಲೆ ರೂಪಹೊಂದಿ, ಮಾರುಕಟ್ಟೆಯ ಬಿಸಿಲಿನಲ್ಲಿ ನೀರು ಚಿಮುಕಿಸಿಕೊಂಡು, ಗಿರಾಕಿಯ ಆಗಮನಕ್ಕಾಗಿ ಕಾಯುತ್ತಿದ್ದ "ಅಕ್ಷರ"ಗಳನ್ನೂ ಗೌರವದಿಂದಲೇ ನೋಡಿಕೊಳ್ಳುತ್ತಿದ್ದ ಸಂಪಾದಕರೊಬ್ಬರ ಕುರಿತು ಮಾತುಗಳಿವು. ಇಷ್ಟೆಲ್ಲಾ ಇಲ್ಯಾಕೆ ಹೇಳಬೇಕಾಗಿದೆ ಎಂದರೆ ನಿನ್ನೆ(ಶನಿವಾರ) ನಂ.1 ಕನ್ನಡ ಪತ್ರಿಕೆಯ ಸಂಪಾದಕ ಎತಿರಾಜನ್ ರಾಘವನ್ ನಮ್ಮನ್ನಗಲಿದ್ದಾರೆ. ಅವರ ಕೆಳಗೆ ಕೆಲಸ ಮಾಡಿದ ಅನುಭವ ಇದೇ ಮೇ.18ಕ್ಕೆ ಒಂದು ವರ್ಷ ತುಂಬುತ್ತದೆ, ಅಷ್ಟೆ! ಅವರು ತೀರಿಕೊಂಡರು ಎಂಬ ಸುದ್ದಿ 'ಸ್ಫೋಟ'ವಾಗುವ ಹೊತ್ತಿಗೆ ನಾನು ಕಚೇರಿಯಲ್ಲಿದ್ದೆ. ಕಳೆದ ನೂರ ಎಪ್ಪತ್ತು ಚಿಲ್ಲರೆ ದಿನಗಳ ಹಿಂದೆ ಶುರುವಾದ 'ಯುವ ಗರ್ಜನೆ' ಎಂಬ ಪರಿಕಲ್ಪನೆಗೆ ದೊಡ್ಡ ಮೈಲಿಗಲ್ಲು ಸಿಕ್ಕ ದಿನ ಅದು. ಪ್ರಾದೇಶಿಕ ಭಾಷೆಯ ಪತ್ರಿಕೆಯೊಂದು ಕಾರ್ಪೋರೇಟ್ ಜಗತ್ತಿನ ವೇದಿಯಲ್ಲಿ ನಿಂತು ತಮ್ಮ ನಿಲುವನ್ನು ತಣ್ಣಗೆ ವಿವರಿಸಿದ ಸಮಯ ಕೂಡ. ಅದರ ವರದಿಗಾ...
ಮಂಗಳೂರು ಡೈರಿ! ಭಾಗ 1 ಜನವಾಹಿನಿಯ ಪಾಳು ಬಿದ್ದ ಬಂಗಲೆಯ ನೆರಳಿನಲ್ಲಿ.... ನಾನು ಎಂಟನೆ ತರಗತಿಯಲ್ಲಿದ್ದಾಗಿನ ನೆನಪು. ತೀರ್ಥಹಳ್ಳಿಯಲ್ಲಿ ನಾನಿದ್ದ ಹಾಸ್ಟೆಲ್ಲಿಗೆ ಜನವಾಹಿನಿ ಪತ್ರಿಕೆ ಬರುತ್ತಿತ್ತು. ಬೆಳಗ್ಗೆ ಆಗುತ್ತಲೆ ಪತ್ರಿಕೆಗಾಗಿ ಪೈಪೋಟಿ ನಡೆಸುತ್ತಿದ್ದೆವು. ಇದಕ್ಕಾಗಿ ಹಲವಾರು ಭಾರಿ ನಮ್ಮಲ್ಲಿ ಗಲಾಟೆಗಳು ಆಗಿದ್ದವು. ಅದೇಕೋ ಆವತ್ತು ಜನವಾಹಿನಿಯೊಂದಿಗೆ ಆರ್ಥವಾಗದ ಸಂದಂಧವೊಂದು ನಮ್ಮಂತ ಚಿಕ್ಕವಯಸ್ಸಿನ ಹುಡುಗರಿಗೆ ಬೆಳೆದಿತ್ತು. ಹಾಗೆಯೆ ಲಂಕೇಶ್ ಪತ್ರಿಕೆ ಕೂಡ ಅದರಲ್ಲಿ ಬರುತ್ತಿದ್ದ ತುಂಟಾಟಕ್ಕಾಗಿ ಓದುತ್ತಿದ್ದೆವು!. ಇವೆಲ್ಲವೂ ಹಳೆಯ ದಿನಗಳು, ಮಾಸಿದ ನೆನಪುಗಳು. ಸಹಜವಾಗಿಯೆ ನಾನು ಸಾಹಿತ್ಯದ ಬಗ್ಗೆ ಬೆಳೆಸಿ ಕೊಂಡಿದ್ದ ಆಸಕ್ತಿ, ನನ್ನಲ್ಲಿ ಹಲವು ಆಲೋಚನೆಗಳನ್ನು ಹುಟ್ಟುಹಾಕಿತು. ಹೊಸ ಪ್ರಪಂಚವೊಂದನ್ನು ಕಂಡ ಆನುಭವ. ಮಲೆನಾಡಿನಲ್ಲಿಯೆ ಹುಟ್ಟಿ ಬೆಳೆದು ಆಲ್ಲಿನ ಪರಿಸರದ ಜೊತೆ ಹೊಂದಿದ ಸಂಬಂಧವೊಂದು ಕಳಚಿಕೊಂಡದ್ದು ಚಳುವಳಿ ಹೋರಾಟ ಅಂತ ಬೀದಿಗೆ ಬಿದ್ದ ಮೇಲೆಯೆ. ಅಲ್ಲಿಯವರೆಗಿದ್ದ ಊರಲ್ಲಿ ಶಿಕಾರಿ ಹುಚ್ಚು, ಕಾಡು ಸುತ್ತುವ ಗೀಳುಗಳು ವೈಚಾರಿಕತೆ ಎಂಬ ಸೋಗಿನಲ್ಲಿ ಪೇವಲವಾಗಿ ಕಂಡಿದ್ದವು. ಜನವಾಹಿನಿ ನಂತರ ಇಷ್ಟವಾಗಿದ್ದು ಆದು ಪ್ರಗತಿಪರ ವಿಚಾರಗಳನ್ನು ಪ್ರತಿಪಾದಿಸುವ ಪತ್ರಿಕೆ ಎಂಬ ಕಾರಣಕ್ಕೆ. ಹಾಗಂತ ನಾನು ನಂಬಿಕೊಂಡಿದ್ದೆ. ಆಷ್ಟರಲ್ಲಾಗಲೆ ಅದು ತನ್ನ ಆಂತರಿಕ ಜಗಳಗಳಿಂದಾಗಿ ಮುಚ್ಚಿಹೋಗುತ್ತು. ಹಾಸ್ಟೆಲ್ಲಿಗೆ ಈ...
ಕಲ್ಲೂರಿ ಎಂಬ ಸಿನಿಮಾ ನೋಡಿದ್ದೀರಾ...? ಪ್ರಶಾಂತ್ ಹುಲ್ಕೋಡು ಸಿನಿಮಾ ಹೇಗಿರಬೇಕು ಎಂದು ನಿರ್ದಿಷ್ಟವಾಗಿ ಹೇಳುವದು ಕಷ್ಟ. ಆದರೆ ಒಳ್ಳೆಯ ಸಿನಿಮಾ ನೋಡುಗನ್ನು ತನ್ನಲ್ಲಿ ಒಂದು ಪಾತ್ರವಾಗಿಸುತ್ತದೆ ಅನ್ನುತ್ತಾರೆ. ಹಾಗಾಗಿಯೆ ಬಾಲಿವುಡ್ ಮಂದಿ ರಿಯಲ್ ಸ್ಟೋರಿಗಳನ್ನು ರೀಲ್‌ನಲ್ಲಿ ತರಲು ಹೆಚ್ಚು ಶ್ರಮವಹಿಸುತ್ತಾರೆ. ಬಾಲಿವುಡ್‌ನಲ್ಲಿಯೂ ಆಂತಹ ಪ್ರಯೋಗಗಳಾಗುತ್ತಿವೆ. ಬದುಕಿಗೆ ಹತ್ತಿರವೆನಿಸುವ ಕತೆಗಳನ್ನು ತೆರೆಗೆ ಅಳವಡಿಸುವುದು ಸುಲಭದ ಕೆಲಸವಲ್ಲ. ಅದಕ್ಕೆ ತನ್ನದೆ ಆದ ಕಮಿಟ್‌ಮೆಂಟ್, ಡೆಡಿಕೇಶನ್ ಇರಬೇಕಾಗುತ್ತದೆ. ಚಿತ್ರದ ನಿರ್ದೇಶಕನಿಗೆ ಅಂತಹ ಸಂವೇದನೆ ಇರದಿದ್ದರೆ ಇಡೀ ಚಿತ್ರ ಹಾಳಾಗಿಬಿಡುತ್ತದೆ. ಈ ಮಾತಿಗೆ ವಿರುದ್ಧವಾಗಿ ಇತ್ತೀಚೆಗೆ ಬಂದ ತಮಿಳಿನ ಕಲ್ಲೂರಿ ಉತ್ತಮ ಉದಾಹರಣೆ. ಈ ಚಿತ್ರದ ಕುರಿತು ಹೇಳುವ ಮುನ್ನ ನಿಮಗೆ ಇದನ್ನು ತೆರೆಗೆ ತಂದ ನಿರ್ದೇಶಕನ ಶ್ರಮದ ಕುರಿತು ಹೇಳಬೇಕು. ಅದು ಕಲ್ಲೂರಿಗಿಂತ ಲೂ ಇಂಟೆರಿಸ್ಟಿಂಗ್. ತಮಿಳಿನ ಪ್ರಸಿದ್ಧ ಚಿತ್ರ ಕಾದಲ್ ನೆನಪಿರಬೇಕು ನಿಮಗೆ. ಅಂತರಜಾತಿ ಪ್ರೇಮ ಕತೆಯನ್ನು ಅದ್ಭುತವಾಗಿ ನಿರೂಪಿಸಿದ ಚಿತ್ರ. ಅದರ ನಿರ್ದೇಶಕ ಬಾಲಾಜಿ ಶಕ್ತಿವೇಲು ಕಾದಲ್ ನಂತರ ನಿರ್ದೇಶಿಸಿದ ಚಿತ್ರವೇ ಕಲ್ಲೂರಿ. ತಮಿಳಿನಲ್ಲಿ ಕಲ್ಲೂರಿ ಎಂದರೆ ಕಾಲೇಜು ಎಂದರ್ಥ. ಕಾದಲ್ ಸೂಪರ್ ಹಿಟ್ ಆದ ನಂತರ ಬಾಲಾಜಿ ಶಕ್ತಿವೇಲು ಮುಂದೆ ನಿರ್ಮಾಪಕರ ದಂಡೇ ನೆರೆದಿತ್ತಂತೆ. ಆದರೆ ಈ ಮಹಾಶಯ ಯಾವುದನ್ನು ಒಪ್ಪಿಕೊಳ್ಳದೆ ಆರ್ಥಿಕ...