ವಿಷಯಕ್ಕೆ ಹೋಗಿ
ಮಹಾಮಾರಿಯ ಭೀತಿಯಲ್ಲಿದ್ದ ತಲೆಮಾರಿ ಹಾಗೂ ಆಂದ್ರದ ಕುರಿತು ಅಭಿಮಾನ!

ಮುಂಜಾನೆ ಹೊರಡುವಾಗ ತಲುಪಲಿದ್ದ ಹಳ್ಳಿಯ ಹೆಸರು ಕೂಡ ಗೊತ್ತಿರಲಿಲ್ಲ. ಸ್ಥಳೀಯ ಎನ್‌ಜಿಒ ಒಂದರ ಸಹಾಯದಿಂದ ’ತಲೆಮಾರಿ’ ಹಳ್ಳಿಗೆ ಹೊರಟಿದ್ದೆವು. ರಾಯಚೂರಿನಿಂದ ಸುಮಾರು ೫೨ ಕಿಮೀ ದೂರದಲ್ಲಿರುವ ತಲೆಮಾರಿ ನಾವು ಕಂಡ ಇತರ ಹಳ್ಳಿಗಳಿಗೆ ಹೋಲಿಸಿದರೆ ಅತಿ ಹೆಚ್ಚು ಹಾನಿಗೊಳಗಾದ ಹಳ್ಳಿ. ನಿಂತ ನೆಲದಿಂದ ಸುಮಾರು ೪೦ ಅಡಿ ಎತ್ತರಕ್ಕೆ ನೆರೆಯ ನೀರು ನುಗ್ಗಿ ಬಂದಿತ್ತಂತೆ. ಅದಕ್ಕೆ ಕುರುವುಗಳಂತೆ ನಾವು ಹೋದಾದ ಅಳಿದುಳಿದ ಮನೆಯ ಗೋಡೆಗಳ ಮೇಲೆ ಕೆಸರು ನೀರಿನ ಕುರುವು ಉಳಿದುಕೊಂಡಿತ್ತು.

ತಲೆಮಾರಿಯ ಇನ್ನೊಂದು ವಿಶೇಷ ಎನಪ್ಪಾ ಅಂದ್ರೆ, ರಾಯಚೂರಿನ ಇತರ ನೆರೆ ಪೀಡಿತ ಹಳ್ಳಿಗಳಿಗೆ ಇಲ್ಲಿನ ಜನ ಮಾದರಿಯಾಗಿದ್ದರು. ನೆರೆ ನಿಂತು ಮೂರು ದಿನಗಳದ್ರೂ ಯಾವ ಜನಪ್ರತಿನಿಧಿಗಳು ವಿಚಾರಿಸಿಕೊಳ್ಳಲಿಲ್ಲ ಎಂಬ ಸಿಟ್ಟಿಗೆ ಎಂಎಲ್‌ಎ ಕಾರಿಗೆ ಬೆಂಕಿ ಇಟ್ಟಿದ್ದರು ಹಳ್ಳಿಯ ಜನ. ನಾವು ಹೋದಾಗ ಒಂದು ಪೊಲೀಸ್ ತುಕುಡಿ ಅತಂಕದಿಂದಲೇ ಊರು ಕಾಯುತ್ತಾ ನಿಂತಿತ್ತು. ಸುಟ್ಟು ಕರಕಲಾದ ವಾಹನಗಳು ನೆರೆಯ ಸ್ಮಾರಕಗಳಂತೆ ಉಳಿಸಿಕೊಂಡಿದ್ದರು. ಊರು ತುಂಬ ಸತ್ತ ಎಮ್ಮೆಗಳ ಹೆಣಗಳ ತುಂಬಾ ಹುಳುಗಳು ಮಿಜಿಗುಡುತ್ತಿದ್ದವು. ಮುಂದೆ ಎದುರಾಗಬಹುದಾದ ಮಹಾಮಾರಿಯೊಂದರ ಮುನ್ಸೂಚನೆಯಂತೆ ಊರು ಗಬ್ಬು ವಾಸನೆ ಹೊಡೆಯುತ್ತಿತ್ತು. ಊರೊಳಗೆ ಕಾಲಿಡಲಾಗದಂತೆ ಕೆಸರು ತುಂಬಿಕೊಂಡಿತ್ತು.



ಆದರೆ ಬಹುತೇಕರು ತಮ್ಮ ಮನೆಗಳ ಒಳಗೆ ಅಳಿದುಳುದ ಸಾಮಾನುಗಳಿಗಾಗಿ ತಡಕಾಡುವುದು ಸಮಾನ್ಯವಾಗಿತ್ತು. ಮಕ್ಕಳು ಶಾಲೆ ಮುಖ ನೋಡದೆ ವಾರವಾಗಿತ್ತು. ಊರಲ್ಲಿದ್ದ ಒಂದು ಪ್ರಾಥಮಿಕ ಶಾಲೆಯಲ್ಲಿ ಜನ ತುಂಬಿಕೊಂಡಿದ್ದರು. ಇರಲು ಮನೆಯೂ ಇಲ್ಲದೆ, ತಿನ್ನಲು ಕಾಳು ಇಲ್ಲದೆ ಇರುವಾಗಲೂ ಮತ್ತೆ ಹೊಸ ಜೀವನ ಆರಂಭಿಸಲು ಜನ ಹೆಣಗಾಡುತ್ತಿದ್ದರು. ಇಳುವರಿಗೆ ಅಂತ ತಂದಿಟ್ಟ ಗೊಬ್ಬರ ನೀರು ಪಾಲಾಗಿತ್ತು. ಅಷ್ಟರಲ್ಲಿ ದೂರದ ಆಂದ್ರದ ಯಾವುದೋ ಯೋಗ ಕೇಂದ್ರದವರು ಬಿಸ್ಕತ್‌ಗಳನ್ನು ತಂದು ಹಂಚಲು ಆರಂಭಿಸಿದರು.

ಈ ಕಾರಣಕ್ಕೊ ಏನೋ ಪ್ರತಿಯೊಬ್ಬರ ಬಾಯಲ್ಲೂ ಆಂದ್ರ ಪ್ರದೇಶದ ಗುಣಗಾನ ಕೇಳಿ ಬರುತ್ತಿತ್ತು. ನಮ್ಮನ್ನು ಆಂದ್ರಕ್ಕೆ ಸೇರಿಸಿ ಎಂದು ಯಾವುದೇ ಮುಜುಗರವಿಲ್ಲದೆ ತಲೆಮಾರಿಯ ಜನ ತಮ್ಮ ಬೇಡಿಕೆ ಮುಂದಿಡುತ್ತಿದ್ದರು. ಆತಂಕದಲ್ಲಿದ್ದ ಜನರ ಸಹಜ ಮನಸ್ಥಿತಿಯಂತೆ ಇದು ಕಾಣುತ್ತಿದ್ದರು ಮುಂದೊಮ್ಮೆ ಗಡಿಯ ಸಮಸ್ಯೆಯ ಸಾಲಿಗೆ ಸೇರುವ ಎಲ್ಲಾ ಲಕ್ಷಣಗಳು ಕಾಣುತ್ತಿತ್ತು ಜನರ ಸಿಟ್ಟಿನ ಆಭಿವ್ಯಕ್ತಿ.



ಮಧ್ಯಾನದ ವರೆಗೂ ತಲೆಮಾರಿಯಲ್ಲಿ ಕಳೆದು ರಾಯಚೂರಿಗೆ ಮರಳಿದೆವು. ರಾಯಚೂರಿನ ಜಿಲ್ಲಾಧಿಕಾರಿಗಳನ್ನು ಬೇಟಿ ಮಾಡಿ ತಲೆಮಾರಿಗೆ ತುರ್ತಾಗಿ ಕನಿಷ್ಠ ಬ್ಲೀಚಿಂಗ್‌ಪೌಡರ್ ಆದ್ರೂ ಕಳುಹಿಸಿ ಸ್ವಾಮಿ ಎಂದು ಹೇಳಲು ಫೋನು ಮಾಡಿದರೆ ಕೇಳಲು ಯಾರು ಇರಲಿಲ್ಲ. ಹೇಳಲು ನಾವಾದರೂ ಯಾರು?

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕಲ್ಲೂರಿ ಎಂಬ ಸಿನಿಮಾ ನೋಡಿದ್ದೀರಾ...? ಪ್ರಶಾಂತ್ ಹುಲ್ಕೋಡು ಸಿನಿಮಾ ಹೇಗಿರಬೇಕು ಎಂದು ನಿರ್ದಿಷ್ಟವಾಗಿ ಹೇಳುವದು ಕಷ್ಟ. ಆದರೆ ಒಳ್ಳೆಯ ಸಿನಿಮಾ ನೋಡುಗನ್ನು ತನ್ನಲ್ಲಿ ಒಂದು ಪಾತ್ರವಾಗಿಸುತ್ತದೆ ಅನ್ನುತ್ತಾರೆ. ಹಾಗಾಗಿಯೆ ಬಾಲಿವುಡ್ ಮಂದಿ ರಿಯಲ್ ಸ್ಟೋರಿಗಳನ್ನು ರೀಲ್‌ನಲ್ಲಿ ತರಲು ಹೆಚ್ಚು ಶ್ರಮವಹಿಸುತ್ತಾರೆ. ಬಾಲಿವುಡ್‌ನಲ್ಲಿಯೂ ಆಂತಹ ಪ್ರಯೋಗಗಳಾಗುತ್ತಿವೆ. ಬದುಕಿಗೆ ಹತ್ತಿರವೆನಿಸುವ ಕತೆಗಳನ್ನು ತೆರೆಗೆ ಅಳವಡಿಸುವುದು ಸುಲಭದ ಕೆಲಸವಲ್ಲ. ಅದಕ್ಕೆ ತನ್ನದೆ ಆದ ಕಮಿಟ್‌ಮೆಂಟ್, ಡೆಡಿಕೇಶನ್ ಇರಬೇಕಾಗುತ್ತದೆ. ಚಿತ್ರದ ನಿರ್ದೇಶಕನಿಗೆ ಅಂತಹ ಸಂವೇದನೆ ಇರದಿದ್ದರೆ ಇಡೀ ಚಿತ್ರ ಹಾಳಾಗಿಬಿಡುತ್ತದೆ. ಈ ಮಾತಿಗೆ ವಿರುದ್ಧವಾಗಿ ಇತ್ತೀಚೆಗೆ ಬಂದ ತಮಿಳಿನ ಕಲ್ಲೂರಿ ಉತ್ತಮ ಉದಾಹರಣೆ. ಈ ಚಿತ್ರದ ಕುರಿತು ಹೇಳುವ ಮುನ್ನ ನಿಮಗೆ ಇದನ್ನು ತೆರೆಗೆ ತಂದ ನಿರ್ದೇಶಕನ ಶ್ರಮದ ಕುರಿತು ಹೇಳಬೇಕು. ಅದು ಕಲ್ಲೂರಿಗಿಂತ ಲೂ ಇಂಟೆರಿಸ್ಟಿಂಗ್. ತಮಿಳಿನ ಪ್ರಸಿದ್ಧ ಚಿತ್ರ ಕಾದಲ್ ನೆನಪಿರಬೇಕು ನಿಮಗೆ. ಅಂತರಜಾತಿ ಪ್ರೇಮ ಕತೆಯನ್ನು ಅದ್ಭುತವಾಗಿ ನಿರೂಪಿಸಿದ ಚಿತ್ರ. ಅದರ ನಿರ್ದೇಶಕ ಬಾಲಾಜಿ ಶಕ್ತಿವೇಲು ಕಾದಲ್ ನಂತರ ನಿರ್ದೇಶಿಸಿದ ಚಿತ್ರವೇ ಕಲ್ಲೂರಿ. ತಮಿಳಿನಲ್ಲಿ ಕಲ್ಲೂರಿ ಎಂದರೆ ಕಾಲೇಜು ಎಂದರ್ಥ. ಕಾದಲ್ ಸೂಪರ್ ಹಿಟ್ ಆದ ನಂತರ ಬಾಲಾಜಿ ಶಕ್ತಿವೇಲು ಮುಂದೆ ನಿರ್ಮಾಪಕರ ದಂಡೇ ನೆರೆದಿತ್ತಂತೆ. ಆದರೆ ಈ ಮಹಾಶಯ ಯಾವುದನ್ನು ಒಪ್ಪಿಕೊಳ್ಳದೆ ಆರ್ಥಿಕ...

'ಕನಸಿನ ಎಡಿಟರ್'!

ಯುವ ಪತ್ರಕರ್ತನ 'ಕನಸಿನ ಎಡಿಟರ್' ಒಂದು ಸುಳಿವನ್ನೂ ಕೊಡದೆ ಕಣ್ಮರೆಯಾಗಿದ್ದಾರೆ! ಇ. ರಾಘವನ್ ಕೈಗೆ ಆಯುಧ ಕೊಟ್ಟು, ರಣ ಬಿಸಿಲಿನ ಮೈದಾನದ ನಡುವೆ, ಶತ್ರುವನ್ನು ಗುರಿಇಟ್ಟು ತೋರಿಸಿ, ಮರೆಯಲ್ಲಿ ನಿಂತು ಮುಗುಳ್ನುಗುತ್ತಿದ್ದ ಭಾವ ಹಠಾತ್ ಗೊಂದಲಕ್ಕೀಡಾಗಿದೆ. ಒಂದು ವರ್ಷಕ್ಕೂ ಕಡಿಮೆ ಅವಧಿಯ ಒಡನಾಟವನ್ನು ಈ ಹೊತ್ತಿಗೆ ವಿವರಿಸಲು ಪದಗಳು ಸಿಗುತ್ತಿಲ್ಲ. ತೊಟ್ಟು ಕಟ್ಟಿಸಿಕೊಂಡು, ಸುವಾಸನೆ ಬೀರುವ ಮಾಲೆ ರೂಪಹೊಂದಿ, ಮಾರುಕಟ್ಟೆಯ ಬಿಸಿಲಿನಲ್ಲಿ ನೀರು ಚಿಮುಕಿಸಿಕೊಂಡು, ಗಿರಾಕಿಯ ಆಗಮನಕ್ಕಾಗಿ ಕಾಯುತ್ತಿದ್ದ "ಅಕ್ಷರ"ಗಳನ್ನೂ ಗೌರವದಿಂದಲೇ ನೋಡಿಕೊಳ್ಳುತ್ತಿದ್ದ ಸಂಪಾದಕರೊಬ್ಬರ ಕುರಿತು ಮಾತುಗಳಿವು. ಇಷ್ಟೆಲ್ಲಾ ಇಲ್ಯಾಕೆ ಹೇಳಬೇಕಾಗಿದೆ ಎಂದರೆ ನಿನ್ನೆ(ಶನಿವಾರ) ನಂ.1 ಕನ್ನಡ ಪತ್ರಿಕೆಯ ಸಂಪಾದಕ ಎತಿರಾಜನ್ ರಾಘವನ್ ನಮ್ಮನ್ನಗಲಿದ್ದಾರೆ. ಅವರ ಕೆಳಗೆ ಕೆಲಸ ಮಾಡಿದ ಅನುಭವ ಇದೇ ಮೇ.18ಕ್ಕೆ ಒಂದು ವರ್ಷ ತುಂಬುತ್ತದೆ, ಅಷ್ಟೆ! ಅವರು ತೀರಿಕೊಂಡರು ಎಂಬ ಸುದ್ದಿ 'ಸ್ಫೋಟ'ವಾಗುವ ಹೊತ್ತಿಗೆ ನಾನು ಕಚೇರಿಯಲ್ಲಿದ್ದೆ. ಕಳೆದ ನೂರ ಎಪ್ಪತ್ತು ಚಿಲ್ಲರೆ ದಿನಗಳ ಹಿಂದೆ ಶುರುವಾದ 'ಯುವ ಗರ್ಜನೆ' ಎಂಬ ಪರಿಕಲ್ಪನೆಗೆ ದೊಡ್ಡ ಮೈಲಿಗಲ್ಲು ಸಿಕ್ಕ ದಿನ ಅದು. ಪ್ರಾದೇಶಿಕ ಭಾಷೆಯ ಪತ್ರಿಕೆಯೊಂದು ಕಾರ್ಪೋರೇಟ್ ಜಗತ್ತಿನ ವೇದಿಯಲ್ಲಿ ನಿಂತು ತಮ್ಮ ನಿಲುವನ್ನು ತಣ್ಣಗೆ ವಿವರಿಸಿದ ಸಮಯ ಕೂಡ. ಅದರ ವರದಿಗಾ...
ನಾಲ್ಕು ಮೂವತ್ತರ ಕಲರವ! ಇದು ಸಂಜೆ ನಾಲ್ಕ ಮೂವತ್ತರ ನಂತರದ ಕಲರವ. ತೀರ್ಥಹಳ್ಳಿಯ ಬಸ್ ನಿಲ್ದಾಣದಲ್ಲಿ ಶಾಲೆ ಬಿಡುತ್ತಿದ್ದಂತೆ ಮಕ್ಕಳು ಸಾಲು ಸಾಲಾಗಿ ತಮ್ಮೂರಿಗೆ ಹೋಗುವ ಬಸ್ಸುಗಳಿಗಾಗಿ ಕಾಯುತ್ತಿರುತ್ತಾರೆ. ಒಂದು ಹತ್ತು ವರ್ಷಗಳ ಹಿಂದೆ ನಾನು ಕೂಡ ಸೇವಾ ಭಾರತಿ ಶಾಲೆಯ ಸಮವಸ್ತ್ರದಲ್ಲಿ ನಮ್ಮೂರಿಗೆ ಹೋಗುವ ಬಸ್ಸಿಗಾಗಿ ಕಾಯುತ್ತಾ ನಿಂತಿರುತ್ತಿದ್ದೆ. ತೀರ್ಥಹಳ್ಳಿಯಲ್ಲಿ ಸೋಮವಾರ ಸಂತೆ. ಅವತ್ತು ಮಾತ್ರ ಬಸ್ಸಿನಲ್ಲಿ ಕಾಲು ಹಾಕಲೂ ಜಾಗವಿರುವುದಿಲ್ಲ. ಸಂತೆ ಮಾಡಿ ಬಂದವರ ತರಕಾರಿ, ಒಣಮೀನುಗಳ ವಾಸನೆ ಘಮ ಬಸ್ಸಿನ ತುಂಬಾ ಆವರಿಸಿಕೊಳ್ಳುತ್ತಿತ್ತು. ಇವತ್ತೂ ಕೂಡ ಭಾರದ ಬ್ಯಾಗನ್ನು ಹಾಕಿಕೊಂಡ ಅನಾಮಿಕ ಪುಟಾಣಿಗಳು ಅದೇ ಕಂಪನ್ನು ಸವಿಯುತ್ತಿದ್ದಾರೆ. ಅವತ್ತು ಒಂದು ರೂಪಾಯಿ ಇದ್ದರೆ ಚಾಕೋಲೆಟ್ ತಿನ್ನುತ್ತಿದ್ದಾಗ ಇದ್ದ ಸಮಾಧಾನ ಇವತ್ತು ಕಾಫಿ ಡೇಯಲ್ಲಿ ಕುಳಿತರು ಸಿಗುವುದಿಲ್ಲ. ನಾನಿಲ್ಲಿ ಹೇಳ ಹೊರಟಿದ್ದು ಅಂತಹ ಪುಟ್ಟು ಮಕ್ಕಳು ತಮ್ಮ ವಿದ್ಯಾಭ್ಯಾಸಕ್ಕಾಗಿ ಚಿಕ್ಕ ವಯಸ್ಸಿನಲ್ಲಿ ತೆರುತ್ತಿರುವ ಬೆಲೆಯ ಕುರಿತು. ತೀರ್ಥಹಳ್ಳಿಯ ಆರ್ಥಿಕ ಪರಿಸ್ಥಿತಿಗೋ ಅಥವಾ ಅಲ್ಲಿನ ಅಡಿಕೆ ಬೆಳೆಗಿರುವ ಬೆಲೆಗೊ ಸಾಮಾನ್ಯರೂ ಕೂಡ ತಮ್ಮ ಮಕ್ಕಳನ್ನು ಇಂಗ್ಲಿಷ್ ಶಾಲೆಗೆ ಕಳುಹಿಸುತ್ತಾರೆ. ಗಲ್ಲಿಗೊಂದರಂತೆ ಪೇಯಿಂಗ್ ಗೆಸ್ಟ್‌ಗಳಿವೆ. ಸ್ವಲ್ಪ ಹಣವಂತರು ತಮ್ಮ ಮಕ್ಕಳನ್ನು ಅಂತಹ ಪೇಯಿಂಗ್ ಗೆಸ್ಟ್‌ಗಳಲ್ಲಿ ಬಿಡುತ್ತಾರೆ. ನಾನು ೮ನೆ ತರಗತಿಯಲ್ಲಿರುವಾಗ ಎರಡೂವರ...