ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ದಲ್ಲಿ ೨೦೦೯. ಜುಲೈ,28ರಲ್ಲಿ ಪ್ರಕಟವಾದ ಲೇಖನ ನಮಗೆ ಈತ ಭಯೋತ್ಪಾದಕ. ಅವರಿಗೆ ಬರೀ ‘ಬಂದೂಕುಧಾರಿ!’ ಪ್ರಶಾಂತ್ ಹುಲ್ಕೋಡು ಮಂಗಳವಾರ, 2009 (06:04 IST) ಮೊಹಮ್ಮದ್ ಅಜ್ಮಲ್ ಅಮೀರ್ ಕಸಬ್ ಗೊತ್ತಲ್ಲ. ಅದೇ ಮುಂಬೈ ದಾಳಿ ಪ್ರಕರಣದಲ್ಲಿ ಸೆರೆ ಸಿಕ್ಕ ಏಕೈಕ ಆರೋಪಿ. ಸಧ್ಯ ಪ್ರಪಂಚದ ಮಾಧ್ಯಮಗಳ ಮುಖ ಪುಟದಲ್ಲಿ ಕಸಬ್ ಜಾಗ ಪಡೆದುಕೊಂಡಿದ್ದಾನೆ. ವಿಶೇಷ ನ್ಯಾಯಾಲಯದ ವಿಚಾರಣೆ ಸಮಯದಲ್ಲಿ ತನ್ನ ಉಡಾಫೆ- ಹಾಗೂ ವಿಚಿತ್ರ ನಡವಳಿಕೆಗಳಿಂದ ಎಲ್ಲರ ಗಮನ ಸೆಳೆದಿರುವ ಕಸಬ್ ಕುರಿತಾದ ಲೇಟೆಸ್ಟ್ ಸುದ್ಧಿಯೊಂದು ಬಂದಿದೆ. ಏನಪ್ಪ ಅಂದ್ರೆ, ಕಸಬ್ ಹಾಗು ಆತನ ಉಳಿದ ೯ ಜನ ಕಳೆದ ನವೆಂಬರ್‌ನಲ್ಲಿ ಮುಂಬೈ ಎಂಬ ಮಹಾನಗರಿಗೆ ಲಗ್ಗೆ ಇಟ್ಟದ್ದು ನಿಮಗೆ ಗೊತ್ತೇ ಇದೆ. ಈಗ ಅವರ ಕೃತ್ಯವನ್ನು ಏನೆಂದು ಕರೆಯಬೇಕು ಎಂದು ಸುದ್ಧಿ ಮನೆಗಳ ಪದ ಪ್ರಯೋಗಶಾಲೆಯಲ್ಲಿ ಸಾಣೆ ಹಿಡಿಯಲಾಗುತ್ತಿದೆ. ಇದಕ್ಕೆ ಕಾರಣವೂ ಇದೆ. ಕಸಬ್ ವಿಚಾರಣೆಗಳನ್ನು ವರದಿ ಮಾಡುತ್ತಿರುವ ಅಮೆರಿಕಾದ ಬಹುತೇಕ ಮಾಧ್ಯಮಗಳು ಕಸಬ್‌ನನ್ನು ಭಯೋತ್ಪಾದಕ ಎಂದು ಕರೆಯುತ್ತಿಲ್ಲ. ನ್ಯೂಯಾರ್ಕ್ ಟೈಮ್ಸ್‌ನಿಂದ ಹಿಡಿದು ವಾಲ್ ಸ್ಟ್ರೀಟ್ ಜರ್ನಲ್‌ವರೆಗೆ ಕಸಬ್ ಗನ್ ಮ್ಯಾನ್ ಅಷ್ಟೆ. ಅಮೆರಿಕಾದ ಪತ್ರಿಕೆಗಳ ಈ ಪದ ಪ್ರಯೋಗ ಸುದ್ಧಿ ಪತ್ರಿಕೆಗಳಲ್ಲಿ ಭಾಷೆ ಬಳಕೆಯ ಕುರಿತಾದ ಹೊಸ ಚರ್ಚೆಗೆ ಕಾರಣವಾಗಿದೆ. ಕಸಬ್ ನ್ಯಾಯಾಲಯದಲ್ಲಿ ಇದ್ದಕ್ಕಿದ್ದ ಹಾಗೆ ‘ನಾನು ತಪ್ಪು ಮಾಡಿದ್ದೇನೆ, ನನ್ನನ್ನು ಗಲ್ಲಿಗೇರಿಸಿ’ ಎಂದು...
ಮಂಗಳೂರು ಡೈರಿ. ಭಾಗ-೩ ತೇಜಸ್ವಿ ಜೊತೆ ನಡೆಯದ ಸಂವಾದ ಪಿಯುಸಿಯ ದಿನಗಳು. ಬಹುಷ ೨೦೦೨ ಇರಬೇಕು. ಅವತ್ತಿಗಾಗಲೇ ಗುಜರಾತ್ ನರಮೇಧ ನಡೆದುಹೊಗಿತ್ತು. ಕರ್ನಾಟಕದ ಬಹುತೇಕ ಬುದ್ದಿಜೀವಿಗಳು ಬಾಬಾಬುಡನ್ ಗಿರಿ ವಿವಾದದಲ್ಲಿ ಸಂಘಪರಿವಾರದ ನಿಲುವನ್ನು ಪ್ರತಿಭಟಿಸಿ ಸುದ್ಧಿಯಲ್ಲಿದ್ದರು. ಆಗಷ್ಟೆ ಹೋರಾಟವೆಂಬ ವಿಸ್ಮಯಕಾರಿ ಜಗತ್ತಿಗೆ ನಾನು ಕಾಲಿಡುತ್ತಿದ್ದ ದಿನಗಳು. ತೀರ್ಥಹಳ್ಳಿಯಲ್ಲಿ ಪಿಯುಸಿಗೆ ಸೇರಿದ್ದೆ. ಮನೆಯಲ್ಲಿ ಸೈನ್ಸ್ ಕೊಡಿಸಿದ್ದರು. ಮಗ ಮುಂದೆ ಇಂಜಿನಿಯರ್ ಅಥವಾ ಡಾಕ್ಟರ್ ಆಗಲಿ ಎಂಬ ದೂರದ ನಿರೀಕ್ಷೆ ಅಪ್ಪ, ಅಮ್ಮಂಗೆ ಇತ್ತು. ಆದರೆ ನನಗೆ ಪತ್ರಿಕೋದ್ಯಮ ಹುಚ್ಚು ಅಂಟಿಕೊಂಡಿತು. ಅಲ್ಲಿನ ಸ್ಥಳೀಯ ಪತ್ರಿಕೆ ವಿನೂತನ ಮಾತುಕತೆಯಲ್ಲಿ ಸಂಬಳವಿಲ್ಲದ ಕೆಲಸಕ್ಕೆ ಸೇರಿದ್ದೆ. ಆಗ ಇದ್ದದ್ದು ನಾನು ಬರೆಯಬೇಕು, ಹೆಸರು ಮಾಡಬೇಕು ಎಂಬ ಕಲ್ಪನೆಗಳು ಅಷ್ಟೆ. ಆದರೆ ಹೆಚ್ಚು ಕಡಿಮೆ ಅವತ್ತು ನನಗೆ ಗಾಡ್ ಫಾದರ್ ರೂಪದಲ್ಲಿದ್ದ ನೆಂಪೆ ದೇವರಾಜ್ ತೀರ್ಥಹಳ್ಳಿಯಲ್ಲಿ ಸಾಮಾಜಿಕ ಹೋರಾಟಗಳನ್ನು ಸಂಘಟಿಸುತ್ತಿದ್ದರು. ಅವರಿಂದಲೇ ನನಗೆ ಬಾಬಾಬುಡನ್ ಗಿರಿ ವಿವಾದದ ಪರಿಚಯವಾಗಿತ್ತು. ಸಂಘಪರಿವಾರದ ಶಾಲೆಯಲ್ಲಿ ಓದಿ ಬೆಳೆದಿದ್ದರೂ, ಅವತ್ತಿಗಾಗಲೇ ಕುವೆಂಪು, ತೇಜಸ್ವಿ ಬರಹಗಳಿಂದ ಆರೆಸ್ಸೆಸ್‌ನ ಹುಸಿ ದೇಶ ಪ್ರೇಮ ಮೈಬಿಟ್ಟು ಹೋಗಿತ್ತು. ಚಿಕ್ಕಮಗಳೂರಿನಲ್ಲಿ ಕೋಮು ಸೌಹಾರ್ದ ವೇದಿಕೆಯ ಎರಡನೆ ವರ್ಷದ ಕಾರ್ಯಕ್ರಮ. ತೀರ್ಥಹಳ್ಳಿಯ ಸಹೃದಯರು, ಕೆಲವು ಹಳೆಯ ತಲೆಮಾ...
ಮಂಗಳೂರು ಡೈರಿ. ಭಾಗ-೨ ಸಕತ್ ಹಾಟ್ ಮಗಾ..! ಸಧ್ಯ ಮಂಗಳೂರಿನಲ್ಲಿ ಬಿಸಿಲು ಹೆಚ್ಚಾಗುತ್ತಿದೆ. ನಾನು ಇಲ್ಲಿಗೆ ಬಂದ ಸಮಯದಲ್ಲಿ ಜಡಿ ಮಳೆ ಗುಡಿಸಿಹಾಕುತ್ತಿತ್ತು. ಈಗ ಮಳೆ ಸ್ವಲ್ಪ ಕಡಿಮೆಯಾದ ಕಾರಣಕ್ಕೇನೋ ಬಿಸಿಲಿನ ತಾಪ ಹೆಚ್ಚುತ್ತಿರುವುದು ಬೆನ್ನಲ್ಲಿ ಮೂಡುತ್ತಿರುವ ಬೆವರಿನ ಸಾಲುಗಳು ತಿಳಿಸುತ್ತಿವೆ. ನನ್ನ ಜೊತೆಯಲ್ಲಿ ಕೆಲಸ ಮಾಡುತ್ತಿರುವ ಇಲ್ಲಿನ ಸ್ಥಳೀಯರು, ‘ನೀವು ಬೇಸಿಗೆಯಲ್ಲಿ ಇಲ್ಲಿರಬೇಕು. ಆಗ ಬಿಸಿಲು ಎಂದರೆ ಏನು ಎಂದು ಗೊತ್ತಾಗುತ್ತದೆ’ ಎಂದು ಬೆದರಿಸುತ್ತಿದ್ದಾರೆ. ನಾನು ಕೆಲಸ ಮಾಡುವ ಪತ್ರಿಕಾ ಕಚೇರಿ ಮಂಗಳೂರಿನ ಇಂಡಸ್ಟ್ರಿಯಲ್ ಏರಿಯಾದಲ್ಲಿರುವುದರಿಂದ ಇಲ್ಲಿ ದಿನನಿತ್ಯ ಬಿಸಿಲಲ್ಲಿ ದುಡಿಯುವ ಕಾರ್ಮಿಕರ ಸಮೂಹವೇ ಕಾಣುತ್ತದೆ. ಮಾಸಲು ಬಟ್ಟೆಯ, ಸಾಧಾರಣ ಉಡುಗೆಯ ಸ್ವಲ್ಪ ಕಂದು ಬಣ್ಣದ ವ್ಯಕ್ತಿತ್ವಗಳು. ನಾನಾದರೂ ಆಫೀಸಿನ -ನಿನ ಕೆಳಗೆ ಕುಳಿತು ಕೆಲಸ ಮಾಡುವುದು, ಇವರಂತೆ ಬಿಸಿಲಿನಲ್ಲಿ ದುಡಿಯುತ್ತಿಲ್ಲವಲ್ಲ ಎಂಬ ಸಮಾದಾನವನ್ನು ನನಗೆ ನಾನೇ ಹೇಳಿಕೊಳ್ಳುತ್ತೇನೆ. ಮಂಗಳೂರೆಂದರೆ ಘಟ್ಟದ ಕೆಳಗಿನ ಊರು, ಸಮುದ್ರ ಅಂತೆಲ್ಲ ಕಲ್ಪನೆಗಳಿದ್ದವು ಅಷ್ಟೆ. ಕುವೆಂಪುರವರ ಮಲೆಗಳಲ್ಲಿ ಮದುಮಗಳು ಕಾದಂಬರಿ ಓದುವಾಗ ಘಟ್ಟದ ಕೆಳಗಿನ ಕೂಲಿಯಾಳುಗಳ ಚಿತ್ರಣ ಬರುತ್ತದೆ. ಆದರೆ ಇವತ್ತು ಮಂಗಳೂರು ಎಂದರೆ ದುಬೈ ದುಡ್ಡಿನಿಂದ ಶ್ರ್ರೀಮಂತವಾದ ಪ್ರದೇಶ ಎಂದು ಸ್ನೇಹಿತರು ಹೇಳುತ್ತಾರೆ. ಆದರೆ ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ದಿನನಿತ್ಯ ಕಾಣುವ ...
ಮುಂಜಾನೆ ಹೊತ್ತಲ್ಲಿ ಸಂಭವಿಸಿದ ಎರಡು ಆತ್ಮಹತ್ಯೆಗಳ ಕುರಿತು ಪ್ರಶಾಂತ್ ಹುಲ್ಕೋಡು ಮೇ.೨೩, ೨೦೦೯ ಹಾಗೂ ಜು.೨೩, ೨೦೦೯. ಈ ಎರಡು ದಿನಗಳ ಮುಂಜಾವು ಆರಂಭಗೊಂಡಿದ್ದು ಆತ್ಮಹತ್ಯೆಗಳ ಮೂಲಕ ! ದಕ್ಷಿಣ ಕೊರಿಯಾದಲ್ಲಿ ಮೇ.೨೩ರಂದು ಮುಂಜಾವು ಆಗಷ್ಟೇ ಬಿಚ್ಚಿಕೊಳ್ಳುತ್ತಿತ್ತು. ದೇಶದ ಮಾಜಿ ಅಧ್ಯಕ್ಷ ರೋ ಮೊ ಯುನ್ ನೋಡಿದ ಕೊನೆಯ ಬೆಳಗಿನ ಜಾವವದು. ಮಿಲಿಯಾಂತರ ಡಾಲರ್‌ಗಳ ಹಗರಣದಲ್ಲಿ ವಿಚಾರಣೆಗೆ ಒಳಗಾಗಿದ್ದರೋ ವಿಪರೀತ ಪಾಪಪ್ರeಯಿಂದ ನರಳುತ್ತಿದ್ದರು. ಅವರಿಗೆ ತಾನು ಆಳಿದ ಜನರ ಎದುರಿಗೆ ಮುಖ ತೋರಿಸುವುದೇ ಅವಮಾನಕರ ಎಂಬ ಭಾವನೆ ಮೂಡಿ ಬಹಳ ದಿನಗಳೇ ಆಗಿದ್ದವು. ಅದೇನನ್ನಿಸಿತೋ ಏನೋ ರೋ ತಮ್ಮ ಆತ್ಮಹತ್ಯೆಗೆ ಅಂತಹದೊಂದು ಮುಂಜಾವನ್ನು ಆಯ್ದುಕೊಂಡರು. ತಮ್ಮ ಮನೆಯ ಹಿಂಬದಿಯ ಬೆಟ್ಟದ ಸಾಲುಗಳ ಮೇಲಿಂದ ಒಂದೇ ನೆಗೆತ. ರೋ ಇತಿಹಾಸವಾಗಿ ಹೋದರು. ಇಂತಹುದೆ ಒಂದು ಮುಂಜಾವುಗೆ ಬೆಂಗಳೂರು ತೆರೆದುಕೊಂಡಿದ್ದು ಜುಲೈ ೨೩ರಂದು. ಬಿಬಿ‌ಎಂಪಿಯ ಸಹಾಯಕ ಆಯುಕ್ತ ಲಕ್ಷ್ಮಣ್ ಬೆಳಗ್ಗೆ ವಾಕಿಂಗ್ ಎಂದು ಬನಶಂಕರಿಯ ತಮ್ಮ ಮನೆಯಿಂದ ಹೊರಟವರು ಸೀದಾ ತಮ್ಮ ಕಚೇರಿ ತಲುಪಿದರು. ಅದೇನು ಯೋಚಿಸಿದರೊ, ಜನರಿಗೆ ಮುಖ ತೋರಿಸಲು ಹಿಂಸೆಯಾಗುತ್ತಿದೆ ಎಂದು ಪತ್ರಬರೆದಿಟ್ಟ ಲಕ್ಷಣ್ ನೇಣು ಬಿಗಿದುಕೊಂಡರು. ಇವರು ಮಾರ್ಚ್ ೧೮ರಂದು ಲೋಕಾಯುಕ್ತ ದಾಳಿಗೆ ಒಳಗಾಗಿದ್ದರು. ಅವರ ಮೇಲೂ ಕೋಟಿ ರೂಪಾಯಿ ಲಂಚದ ಆರೋಪವಿತ್ತು. ಮೇಲ್ನೋಟಕ್ಕೆ ಈ ಎರಡು ಸಾವುಗಳು ಪ್ರಪಂಚದಲ್ಲಿ ದಿನನಿತ್ಯ ಸಂಭವಿಸು...
ಕಲ್ಲೂರಿ ಎಂಬ ಸಿನಿಮಾ ನೋಡಿದ್ದೀರಾ...? ಪ್ರಶಾಂತ್ ಹುಲ್ಕೋಡು ಸಿನಿಮಾ ಹೇಗಿರಬೇಕು ಎಂದು ನಿರ್ದಿಷ್ಟವಾಗಿ ಹೇಳುವದು ಕಷ್ಟ. ಆದರೆ ಒಳ್ಳೆಯ ಸಿನಿಮಾ ನೋಡುಗನ್ನು ತನ್ನಲ್ಲಿ ಒಂದು ಪಾತ್ರವಾಗಿಸುತ್ತದೆ ಅನ್ನುತ್ತಾರೆ. ಹಾಗಾಗಿಯೆ ಬಾಲಿವುಡ್ ಮಂದಿ ರಿಯಲ್ ಸ್ಟೋರಿಗಳನ್ನು ರೀಲ್‌ನಲ್ಲಿ ತರಲು ಹೆಚ್ಚು ಶ್ರಮವಹಿಸುತ್ತಾರೆ. ಬಾಲಿವುಡ್‌ನಲ್ಲಿಯೂ ಆಂತಹ ಪ್ರಯೋಗಗಳಾಗುತ್ತಿವೆ. ಬದುಕಿಗೆ ಹತ್ತಿರವೆನಿಸುವ ಕತೆಗಳನ್ನು ತೆರೆಗೆ ಅಳವಡಿಸುವುದು ಸುಲಭದ ಕೆಲಸವಲ್ಲ. ಅದಕ್ಕೆ ತನ್ನದೆ ಆದ ಕಮಿಟ್‌ಮೆಂಟ್, ಡೆಡಿಕೇಶನ್ ಇರಬೇಕಾಗುತ್ತದೆ. ಚಿತ್ರದ ನಿರ್ದೇಶಕನಿಗೆ ಅಂತಹ ಸಂವೇದನೆ ಇರದಿದ್ದರೆ ಇಡೀ ಚಿತ್ರ ಹಾಳಾಗಿಬಿಡುತ್ತದೆ. ಈ ಮಾತಿಗೆ ವಿರುದ್ಧವಾಗಿ ಇತ್ತೀಚೆಗೆ ಬಂದ ತಮಿಳಿನ ಕಲ್ಲೂರಿ ಉತ್ತಮ ಉದಾಹರಣೆ. ಈ ಚಿತ್ರದ ಕುರಿತು ಹೇಳುವ ಮುನ್ನ ನಿಮಗೆ ಇದನ್ನು ತೆರೆಗೆ ತಂದ ನಿರ್ದೇಶಕನ ಶ್ರಮದ ಕುರಿತು ಹೇಳಬೇಕು. ಅದು ಕಲ್ಲೂರಿಗಿಂತ ಲೂ ಇಂಟೆರಿಸ್ಟಿಂಗ್. ತಮಿಳಿನ ಪ್ರಸಿದ್ಧ ಚಿತ್ರ ಕಾದಲ್ ನೆನಪಿರಬೇಕು ನಿಮಗೆ. ಅಂತರಜಾತಿ ಪ್ರೇಮ ಕತೆಯನ್ನು ಅದ್ಭುತವಾಗಿ ನಿರೂಪಿಸಿದ ಚಿತ್ರ. ಅದರ ನಿರ್ದೇಶಕ ಬಾಲಾಜಿ ಶಕ್ತಿವೇಲು ಕಾದಲ್ ನಂತರ ನಿರ್ದೇಶಿಸಿದ ಚಿತ್ರವೇ ಕಲ್ಲೂರಿ. ತಮಿಳಿನಲ್ಲಿ ಕಲ್ಲೂರಿ ಎಂದರೆ ಕಾಲೇಜು ಎಂದರ್ಥ. ಕಾದಲ್ ಸೂಪರ್ ಹಿಟ್ ಆದ ನಂತರ ಬಾಲಾಜಿ ಶಕ್ತಿವೇಲು ಮುಂದೆ ನಿರ್ಮಾಪಕರ ದಂಡೇ ನೆರೆದಿತ್ತಂತೆ. ಆದರೆ ಈ ಮಹಾಶಯ ಯಾವುದನ್ನು ಒಪ್ಪಿಕೊಳ್ಳದೆ ಆರ್ಥಿಕ...
ಮಂಗಳೂರು ಡೈರಿ! ಭಾಗ 1 ಜನವಾಹಿನಿಯ ಪಾಳು ಬಿದ್ದ ಬಂಗಲೆಯ ನೆರಳಿನಲ್ಲಿ.... ನಾನು ಎಂಟನೆ ತರಗತಿಯಲ್ಲಿದ್ದಾಗಿನ ನೆನಪು. ತೀರ್ಥಹಳ್ಳಿಯಲ್ಲಿ ನಾನಿದ್ದ ಹಾಸ್ಟೆಲ್ಲಿಗೆ ಜನವಾಹಿನಿ ಪತ್ರಿಕೆ ಬರುತ್ತಿತ್ತು. ಬೆಳಗ್ಗೆ ಆಗುತ್ತಲೆ ಪತ್ರಿಕೆಗಾಗಿ ಪೈಪೋಟಿ ನಡೆಸುತ್ತಿದ್ದೆವು. ಇದಕ್ಕಾಗಿ ಹಲವಾರು ಭಾರಿ ನಮ್ಮಲ್ಲಿ ಗಲಾಟೆಗಳು ಆಗಿದ್ದವು. ಅದೇಕೋ ಆವತ್ತು ಜನವಾಹಿನಿಯೊಂದಿಗೆ ಆರ್ಥವಾಗದ ಸಂದಂಧವೊಂದು ನಮ್ಮಂತ ಚಿಕ್ಕವಯಸ್ಸಿನ ಹುಡುಗರಿಗೆ ಬೆಳೆದಿತ್ತು. ಹಾಗೆಯೆ ಲಂಕೇಶ್ ಪತ್ರಿಕೆ ಕೂಡ ಅದರಲ್ಲಿ ಬರುತ್ತಿದ್ದ ತುಂಟಾಟಕ್ಕಾಗಿ ಓದುತ್ತಿದ್ದೆವು!. ಇವೆಲ್ಲವೂ ಹಳೆಯ ದಿನಗಳು, ಮಾಸಿದ ನೆನಪುಗಳು. ಸಹಜವಾಗಿಯೆ ನಾನು ಸಾಹಿತ್ಯದ ಬಗ್ಗೆ ಬೆಳೆಸಿ ಕೊಂಡಿದ್ದ ಆಸಕ್ತಿ, ನನ್ನಲ್ಲಿ ಹಲವು ಆಲೋಚನೆಗಳನ್ನು ಹುಟ್ಟುಹಾಕಿತು. ಹೊಸ ಪ್ರಪಂಚವೊಂದನ್ನು ಕಂಡ ಆನುಭವ. ಮಲೆನಾಡಿನಲ್ಲಿಯೆ ಹುಟ್ಟಿ ಬೆಳೆದು ಆಲ್ಲಿನ ಪರಿಸರದ ಜೊತೆ ಹೊಂದಿದ ಸಂಬಂಧವೊಂದು ಕಳಚಿಕೊಂಡದ್ದು ಚಳುವಳಿ ಹೋರಾಟ ಅಂತ ಬೀದಿಗೆ ಬಿದ್ದ ಮೇಲೆಯೆ. ಅಲ್ಲಿಯವರೆಗಿದ್ದ ಊರಲ್ಲಿ ಶಿಕಾರಿ ಹುಚ್ಚು, ಕಾಡು ಸುತ್ತುವ ಗೀಳುಗಳು ವೈಚಾರಿಕತೆ ಎಂಬ ಸೋಗಿನಲ್ಲಿ ಪೇವಲವಾಗಿ ಕಂಡಿದ್ದವು. ಜನವಾಹಿನಿ ನಂತರ ಇಷ್ಟವಾಗಿದ್ದು ಆದು ಪ್ರಗತಿಪರ ವಿಚಾರಗಳನ್ನು ಪ್ರತಿಪಾದಿಸುವ ಪತ್ರಿಕೆ ಎಂಬ ಕಾರಣಕ್ಕೆ. ಹಾಗಂತ ನಾನು ನಂಬಿಕೊಂಡಿದ್ದೆ. ಆಷ್ಟರಲ್ಲಾಗಲೆ ಅದು ತನ್ನ ಆಂತರಿಕ ಜಗಳಗಳಿಂದಾಗಿ ಮುಚ್ಚಿಹೋಗುತ್ತು. ಹಾಸ್ಟೆಲ್ಲಿಗೆ ಈ...